ಬ್ರೇಕಿಂಗ್ ನ್ಯೂಸ್
12-12-22 10:58 pm Mangalore Correspondent ಕರಾವಳಿ
ಮಂಗಳೂರು, ಡಿ.12 : ರಾಜ್ಯದಲ್ಲಿ ಪಂಚರತ್ನ ರಥಯಾತ್ರೆಯ ಪೂರ್ವ ತಯಾರಿಯಾಗಿ ಮಂಗಳೂರು ದಕ್ಷಿಣ ವಿಧಾನಸಭೆ ಕ್ಷೇತ್ರದ ಜಾತ್ಯತೀತ ಜನತಾದಳದ ಪ್ರಚಾರ ಜಾಥಾಕ್ಕೆ ನಗರದ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಲಾಯಿತು. ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಾಕೆ ಮಾದವ ಗೌಡ ರಥಕ್ಕೆ ಚಾಲನೆ ನೀಡಿದರು.
ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಅವರ ಜಲಧಾರೆ ಹಾಗೂ ಪಂಚರತ್ನ ಯೋಜನೆ ಈ ರಾಜ್ಯದ ನವನಿರ್ಮಾಣದ ಕಲ್ಪನೆ. ರಾಜ್ಯದ ಮೂಲೆ ಮೂಲೆಗಳಿಂದ ಬೆಂಬಲ ದೊರಕುತ್ತಿದ್ದು ವಿರೋಧ ಪಕ್ಷಗಳು ಇದರಿಂದ ಭೀತಿಗೊಳಗಾಗಿದ್ದಾರೆ ಎಂದು ಜಾಕೆ ಮಾಧವ ಗೌಡ ಹೇಳಿದರು.
ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷೆ ಮತ್ತು ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ ಕುಮಾರಸ್ವಾಮಿಯವರ ಆದೇಶದ ಮೇರೆಗೆ ಈ ಕಾರ್ಯಕ್ರಮ ಆಯೋಜಿಸಿದ್ದು ವಿಧಾನಸಭಾ ಕ್ಷೇತ್ರದ 38 ವಾರ್ಡಗಳಲ್ಲಿ ಪ್ರಚಾರ ಜಾಥಾ ಸಂಚರಿಸಲಿದೆ ಎಂದು ಹೇಳಿದರು.
ಜಿಲ್ಲಾ ವಕ್ತಾರ ಸುಶೀಲ್ ನೊರೊನ್ಹಾ ಮಾತನಾಡಿ ಬಿಜೆಪಿ ಪಕ್ಷ ಜನರಲ್ಲಿ ಭೀತಿ, ದ್ವೇಷ ಹರಡುತ್ತಿದೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಬೆಲೆ ನಿಯಂತ್ರಣ ಮಾಡಲು ಸಂಪೂರ್ಣ ಸೋತಿದೆ. ಇನ್ನೊಂದೆಡೆ ಕಾಂಗ್ರೆಸ್ ಅಧಿಕಾರ ಪಡೆದ ಹಾಗೆ ತಿರುಕನ ಕನಸು ಕಂಡಿದ್ದು ಮುಖ್ಯಮಂತ್ರಿ ಪೈಪೋಟಿಯಲ್ಲಿ ತೊಡಗಿದೆ ಎಂದು ಹೇಳಿದರು. ರಾಜ್ಯ ಜೆಡಿಎಸ್ ನಾಯಕರಾದ ರತ್ನಾಕರ ಸುವರ್ಣ, ಜಮೀರ್ ಷಾ, ಇಕ್ಬಾಲ್ ಮುಲ್ಕಿ. ದಿನಕರ್ ಉಳ್ಳಾಲ್ ಕಡಬ ಕ್ಷೇತ್ರದ ಅಧ್ಯಕ್ಷ ಮೀರಾ ಸಾಹೇಬ್, ಯುವನಾಯಕ ಪೈಜಲ್, ಕನಕದಾಸ ಕುಳೂರ್, ಮುನೀರ್ ಮುಕ್ಕಚೇರಿ, ವಿನ್ಸೆಂಟ್ ಕೋಡಿಕಲ್, ಅಲ್ತಾಫ್ ತುಂಬೆ, ರವೀಂದ್ರ ಉಳ್ಳಾಲ, ವೀಣಾ ಶೆಟ್ಟಿ, ಭಾರತೀ ಪುಷ್ಪರಾಜನ್, ಪ್ರಿಯಾ ಸಾಲಿಯಾನ್, ಯುವ ಜನತಾದಳ ವಿದ್ಯಾರ್ಥಿ ಘಟಕದ ಅಧ್ಯಕ್ಷ ಬಿಲಾಲ್ ಮಹಮದ್ ಉಪಸ್ಥಿತರಿದ್ದರು.
HD Kumaraswamy will surely become next cm of Karnataka, Madava Gowda.
02-09-25 02:37 pm
HK News Desk
Man sets woman on fire, Bangalore: ತನ್ನನ್ನು ಬ...
01-09-25 10:53 pm
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
02-09-25 04:44 pm
Mangalore Correspondent
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
ಧರ್ಮಸ್ಥಳ ಚಲೋ ಬೆನ್ನಲ್ಲೇ ಸೌಜನ್ಯಾ ಮನೆಗೆ ಭೇಟಿಯಿತ್...
01-09-25 10:01 pm
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
02-09-25 04:31 pm
Mangalore Correspondent
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm