ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm