ಬ್ರೇಕಿಂಗ್ ನ್ಯೂಸ್
13-12-22 02:03 pm Mangalore Correspondent ಕರಾವಳಿ
ಮಂಗಳೂರು, ಡಿ.13: ಬೈಕಂಪಾಡಿಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಲಕ್ಷ್ಮೀ ಗಣೇಶ್ ಮತ್ತು ಡಿವೈಎಸ್ಪಿ ಚೆಲುವರಾಜು ನೇತೃತ್ವದಲ್ಲಿ ದಾಳಿ ನಡೆದಿದ್ದು ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಫೈಲ್ ಗಳನ್ನು ಕ್ಲೀಯರ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಣ್ಣ ಪುಟ್ಟ ಕೈಗಾರಿಕೆಗಳ ಲೈಸನ್ಸ್ ನವೀಕರಣ ಮಾಡುವುದಕ್ಕೂ ಅಧಿಕಾರಿಗಳು ಡಿಮಾಂಡ್ ಇಟ್ಟಿರುವ ಬಗ್ಗೆ ದೂರು ಬಂದಿದ್ದರಿಂದ ಲೋಕಾಯುಕ್ತ ದಾಳಿ ನಡೆದಿದೆ.
ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೈಕಂಪಾಡಿಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಕೈಗಾರಿಕೆಗಳ ಸಂಬಂಧಪಟ್ಟ ಕಡತಗಳನ್ನು ವಿನಾಕಾರಣ ಬಾಕಿ ಇಡಲಾಗಿದೆಯೇ ಎಂದು ತಪಾಸಣೆ ನಡೆಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸದೆ, ಸಣ್ಣ ಪುಟ್ಟ ಕೈಗಾರಿಕೆಗಳಿಂದಲೂ ಹಣಕ್ಕಾಗಿ ಡಿಮ್ಯಾಂಡ್ ಮಾಡುವುದು, ಹಣ ಪಡೆದು ಮಾಲಿನ್ಯವನ್ನು ಸಾರ್ವಜನಿಕ ಪ್ರದೇಶಕ್ಕೆ ಹರಿಸಲು ಅವಕಾಶ ಕೊಡುವುದು ಇತ್ಯಾದಿ ಆರೋಪಗಳಿದ್ದವು. ಮುಕ್ಕ, ಕುಳಾಯಿ ಪ್ರದೇಶದಲ್ಲಿ ಸಮುದ್ರ ತೀರದಲ್ಲಿ ಬಹಳಷ್ಟು ಫಿಶ್ ಮಿಲ್ ಕಂಪನಿಗಳು ಮಾಲಿನ್ಯವನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರೂ, ಕಚೇರಿಯ ಅಧಿಕಾರಿಗಳು ಗಿಂಬಳ ಪಡೆದು ಮೌನವಾಗಿ ಇರುತ್ತಿದ್ದರು.
ಎಂಆರ್ ಪಿಎಲ್, ಬಿಎಸ್ಎಫ್ ರೀತಿಯ ದೊಡ್ಡ ಕೈಗಾರಿಕೆಗಳ ಮಾಲಿನ್ಯದ ಬಗ್ಗೆ ಜೋಕಟ್ಟೆಯ ನಾಗರಿಕರು ಬಹಳಷ್ಟು ಬಾರಿ ಪ್ರತಿಭಟನೆ ನಡೆಸಿದರೂ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ತಮಗೂ ಅದಕ್ಕೂ ಸಂಬಂಧವೇ ಇಲ್ಲ ಎನ್ನುವ ರೀತಿ ವರ್ತಿಸುತ್ತಿದ್ದರು. ಇದೀಗ ಮೊದಲ ಬಾರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ.
Lokayukta raids the Environmental department in Baikampady Mangalore. Checks Emilas after receiving too many complaints over clearance.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm