ಬ್ರೇಕಿಂಗ್ ನ್ಯೂಸ್
13-12-22 08:47 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ನಿರ್ಮಾಣವಾಗಲಿರುವ ಬಹುವಿಧ ಸೌಲಭ್ಯಗಳಿರುವ 5 ಕೋಟಿ ರೂ. ವೆಚ್ಚದ ಆಕ್ಟಿವಿಟಿ ಸೆಂಟರ್ ಗೆ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆಗಿರುವ ಉದ್ಯಮಿ ಸೆಂಚುರಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ಡಾ.ಪಿ.ದಯಾನಂದ ಪೈ ಮೊದಲ ಹಂತದಲ್ಲಿ ತಮ್ಮ ಎರಡು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ನವೀಕೃತ ಅಕಾಡೆಮಿಕ್ ಬ್ಲಾಕ್ ಉದ್ಘಾಟಿಸುವ ಸಂದರ್ಭದಲ್ಲಿ ಅವರು ಈ ಕೊಡುಗೆಯನ್ನು ಘೋಷಿಸಿದರು. ಶತಮಾನದ ಇತಿಹಾಸವಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಸಾಧನೆ ದೊಡ್ಡದು ಎಂದ ಅವರು ತನ್ನ ವೃತ್ತಿ ಜೀವನ ರೂಪಿಸುವಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಋಣ ತೀರಿಸಲಾಗದ್ದು. ಈ ಭಾವನಾತ್ಮಕ ಬಾಂಧವ್ಯ ತನ್ನ ಕುಟುಂಬದ ಜತೆ ನಿರಂತರವಾಗಿರಬೇಕು ಎಂದವರು ಆಶಯ ವ್ಯಕ್ತಪಡಿಸಿದರು.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಾಣ ಗೊಳ್ಳಲಿರುವ ಸ್ಟೂಡೆಂಟ್ಸ್ ಆಕ್ಟಿವಿಟಿ ಸೆಂಟರ್ 2 ಸಾವಿರ ಆಸನ ಸಾಮರ್ಥ್ಯ, ಪ್ರಸಕ್ತ ಯುವ ಪೀಳಿಗೆಯ ಸರ್ವಾಂಗೀಣ ವಿಕಾಸಕ್ಕೆ ಪೂರಕ ಸೌಲಭ್ಯಗಳು, ಪಠ್ಯೇತರ ಪೂರಕ ಚಟುವಟಿಕೆಗಳಿಗೆ ಈ ಸೆಂಟರ್ ವೇದಿಕೆಯಾಗಲಿದೆ. ಮಿನಿ ಥಿಯೇಟರ್ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಪೂರಕವಾಗಿ ಎಲ್ಲ ವೈವಿಧ್ಯತೆಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದೆ.

ಈ ಸಂದರ್ಭದಲ್ಲಿ ಶ್ರೀಮತಿ ಮೋಹಿನಿ ಡಿ.ಪೈ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಚೇರ್ಮನ್ ಪದ್ಮಶ್ರೀ ಟಿ.ವಿ.ಮೋಹನದಾಸ್ ಪೈ, ಹಾಂಗ್ಯೋ ಐಸ್ ಕ್ರೀಮ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್ ಜಿ. ಪೈ, ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕೆನರಾ ಸಂಸ್ಥೆಗಳ ನಿರ್ದೇಶಕ ಡಾ. ರಾಧಾಕೃಷ್ಣ ಐತಾಳ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣೇಶ್ ಭಟ್ ಉಪಸ್ಥಿತರಿದ್ದರು.
Businessmen Dayananda Pai donates 2 crores to Mangalore Canara engineering college for the construction of the activity centre.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm