ಬ್ರೇಕಿಂಗ್ ನ್ಯೂಸ್
13-12-22 08:47 pm Mangalore Correspondent ಕರಾವಳಿ
ಮಂಗಳೂರು, ಡಿ.13 : ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಪ್ರಾಯೋಜಿತ ಕೆನರಾ ಇಂಜಿನಿಯರಿಂಗ್ ಕಾಲೇಜು ಕ್ಯಾಂಪಸ್ ನಲ್ಲಿ ನಿರ್ಮಾಣವಾಗಲಿರುವ ಬಹುವಿಧ ಸೌಲಭ್ಯಗಳಿರುವ 5 ಕೋಟಿ ರೂ. ವೆಚ್ಚದ ಆಕ್ಟಿವಿಟಿ ಸೆಂಟರ್ ಗೆ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯೂ ಆಗಿರುವ ಉದ್ಯಮಿ ಸೆಂಚುರಿ ಬಿಲ್ಡರ್ಸ್ ಆಡಳಿತ ನಿರ್ದೇಶಕ ಡಾ.ಪಿ.ದಯಾನಂದ ಪೈ ಮೊದಲ ಹಂತದಲ್ಲಿ ತಮ್ಮ ಎರಡು ಕೋಟಿ ರೂಪಾಯಿಗಳ ಕೊಡುಗೆಯನ್ನು ಘೋಷಿಸಿದ್ದಾರೆ.
ಕಾಲೇಜಿನ ಆವರಣದಲ್ಲಿ ನವೀಕೃತ ಅಕಾಡೆಮಿಕ್ ಬ್ಲಾಕ್ ಉದ್ಘಾಟಿಸುವ ಸಂದರ್ಭದಲ್ಲಿ ಅವರು ಈ ಕೊಡುಗೆಯನ್ನು ಘೋಷಿಸಿದರು. ಶತಮಾನದ ಇತಿಹಾಸವಿರುವ ಕೆನರಾ ಶಿಕ್ಷಣ ಸಂಸ್ಥೆಗಳ ಸಾಧನೆ ದೊಡ್ಡದು ಎಂದ ಅವರು ತನ್ನ ವೃತ್ತಿ ಜೀವನ ರೂಪಿಸುವಲ್ಲಿ ಕೆನರಾ ಶಿಕ್ಷಣ ಸಂಸ್ಥೆಗಳ ಋಣ ತೀರಿಸಲಾಗದ್ದು. ಈ ಭಾವನಾತ್ಮಕ ಬಾಂಧವ್ಯ ತನ್ನ ಕುಟುಂಬದ ಜತೆ ನಿರಂತರವಾಗಿರಬೇಕು ಎಂದವರು ಆಶಯ ವ್ಯಕ್ತಪಡಿಸಿದರು.

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ 20 ಸಾವಿರ ಚದರ ಅಡಿ ವಿಸ್ತಾರದಲ್ಲಿ ನಿರ್ಮಾಣ ಗೊಳ್ಳಲಿರುವ ಸ್ಟೂಡೆಂಟ್ಸ್ ಆಕ್ಟಿವಿಟಿ ಸೆಂಟರ್ 2 ಸಾವಿರ ಆಸನ ಸಾಮರ್ಥ್ಯ, ಪ್ರಸಕ್ತ ಯುವ ಪೀಳಿಗೆಯ ಸರ್ವಾಂಗೀಣ ವಿಕಾಸಕ್ಕೆ ಪೂರಕ ಸೌಲಭ್ಯಗಳು, ಪಠ್ಯೇತರ ಪೂರಕ ಚಟುವಟಿಕೆಗಳಿಗೆ ಈ ಸೆಂಟರ್ ವೇದಿಕೆಯಾಗಲಿದೆ. ಮಿನಿ ಥಿಯೇಟರ್ ಸೇರಿದಂತೆ ವಿದ್ಯಾರ್ಥಿಗಳ ಅಗತ್ಯಗಳಿಗೆ ಪೂರಕವಾಗಿ ಎಲ್ಲ ವೈವಿಧ್ಯತೆಯ ಸೌಲಭ್ಯಗಳನ್ನು ಒದಗಿಸುವ ಯೋಜನೆ ಇದಾಗಿದೆ.

ಈ ಸಂದರ್ಭದಲ್ಲಿ ಶ್ರೀಮತಿ ಮೋಹಿನಿ ಡಿ.ಪೈ ಮಣಿಪಾಲ್ ಗ್ಲೋಬಲ್ ಎಜುಕೇಶನ್ ಚೇರ್ಮನ್ ಪದ್ಮಶ್ರೀ ಟಿ.ವಿ.ಮೋಹನದಾಸ್ ಪೈ, ಹಾಂಗ್ಯೋ ಐಸ್ ಕ್ರೀಮ್ ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರದೀಪ್ ಜಿ. ಪೈ, ಕೆನರಾ ಹೈಸ್ಕೂಲ್ ಎಸೋಸಿಯೇಶನ್ ಅಧ್ಯಕ್ಷ ಡಿ.ವಾಸುದೇವ ಕಾಮತ್, ಉಪಾಧ್ಯಕ್ಷ ಎಂ. ಪದ್ಮನಾಭ ಪೈ, ಕಾರ್ಯದರ್ಶಿ ಎಂ. ರಂಗನಾಥ ಭಟ್, ಕೆನರಾ ಸಂಸ್ಥೆಗಳ ನಿರ್ದೇಶಕ ಡಾ. ರಾಧಾಕೃಷ್ಣ ಐತಾಳ್, ಆಡಳಿತ ಮಂಡಳಿಯ ಸದಸ್ಯರು ಹಾಗೂ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಣೇಶ್ ಭಟ್ ಉಪಸ್ಥಿತರಿದ್ದರು.
Businessmen Dayananda Pai donates 2 crores to Mangalore Canara engineering college for the construction of the activity centre.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm