ಬ್ರೇಕಿಂಗ್ ನ್ಯೂಸ್
15-12-22 02:35 pm Mangalore Correspondent ಕರಾವಳಿ
ಮಂಗಳೂರು, ಡಿ.15 : ಬಸ್ಸಿನಲ್ಲಿ ಹಿಂದು ಮಹಿಳೆಯ ಬ್ಯಾಗ್ ಹಿಡಿದುಕೊಂಡ ಕಾರಣಕ್ಕೆ ಹಿಂದು ಸಂಘಟನೆ ಯುವಕರು ಸೇರಿ ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ರಾಯಿ ಎಂಬಲ್ಲಿ ನಡೆದಿದೆ.
ಮುಲ್ಲರಪಟ್ನ ನಿವಾಸಿ ಇಸಾಕ್ (45) ಹಲ್ಲೆಗೊಳಗಾದ ಯುವಕ. ಇಸಾಕ್ ವೃತ್ತಿಯಲ್ಲಿ ಮೇಸ್ತ್ರಿ ಕೆಲಸ ಮಾಡುತ್ತಿದ್ದು ಬುಧವಾರ ಬೆಳಗ್ಗೆ ಮೂಡುಬಿದ್ರೆ- ಬಿಸಿ ರೋಡ್ ಬಸ್ಸಿನಲ್ಲಿ ತೆರಳುತ್ತಿದ್ದಾಗ ಬಸ್ಸಿನಲ್ಲಿ ರಶ್ ಇದ್ದ ಕಾರಣಕ್ಕೆ ಮಹಿಳೆಯೊಬ್ಬರು ಇಸಾಕ್ ಅವರ ಕೈಗೆ ತನ್ನಲ್ಲಿದ್ದ ಪ್ಲಾಸ್ಟಿಕ್ ಬ್ಯಾಗ್ ಕೊಟ್ಟಿದ್ದರು. ಆನಂತರ, ತನ್ನ ಸ್ಟಾಪ್ ಬಂದಾಗ ಮಹಿಳೆ ಬ್ಯಾಗ್ ಪಡೆದು ಇಳಿದು ಹೋಗಿದ್ದರು. ಇದನ್ನು ಬಸ್ಸಿನಲ್ಲಿದ್ದ ವ್ಯಕ್ತಿಯೊಬ್ಬ ಬೇರೆ ರೀತಿಯಲ್ಲಿ ಅರ್ಥ ಮಾಡ್ಕೊಂಡು ಸಂಘಟನೆ ಯುವಕರಿಗೆ ಮಾಹಿತಿ ನೀಡಿದ್ದ.


ಖಾಸಗಿ ಬಸ್ಸಿನಿಂದ ರಾಯಿ ಎಂಬಲ್ಲಿ ಇಳಿದ ಇಸಾಕ್ ಮೇಲೆ ಯುವಕರು ಹಲ್ಲೆ ನಡೆಸಿದ್ದಾರೆ. ಆನಂತರ, ಅಲ್ಲಿಯೇ ಮರಕ್ಕೆ ಕಟ್ಟಿ ಹಾಕಿ ದೊಣ್ಣೆಯಲ್ಲಿ ಹಲ್ಲೆ ನಡೆಸಿದ್ದಾರೆ. ಬಸ್ಸಿನಲ್ಲಿದ್ದ ಕಂಡೆಕ್ಟರ್ ಬಗ್ಗೆಯೂ ಆರೋಪ ಕೇಳಿಬಂದಿದೆ. ಆದರೆ ಹಲ್ಲೆ ಕೃತ್ಯದಲ್ಲಿ ಕಂಡೆಕ್ಟರ್ ಇರಲಿಲ್ಲವೆಂದು ಇಸಾಕ್ ಪೊಲೀಸರಿಗೆ ತಿಳಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಇಸಾಕ್ ಬಳಿ ಹೇಳಿಕೆ ಪಡೆದಿದ್ದಾರೆ.

ಇಸಾಕ್ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆ ನಡೆಸಿದ ನಾಲ್ವರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ನೈತಿಕ ಪೊಲೀಸ್ ಕೃತ್ಯ ನಡೆಸಲಾಗಿದೆ ಎನ್ನಲಾಗುತ್ತಿದ್ದು ಘಟನೆ ಬಗ್ಗೆ ತೀವ್ರ ಖಂಡನೆ ವ್ಯಕ್ತವಾಗಿದೆ.
Another moral policing in Mangalore. Man thrashed brutally for touching a woman's bag in a moving bus by a pro hindu activists. Police are now in the search for the accused. Isaac from Mularapatna from tied up to the pole and was brutally beaten.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm