ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm