ಬ್ರೇಕಿಂಗ್ ನ್ಯೂಸ್
16-12-22 11:48 am Mangalore Correspondent ಕರಾವಳಿ
ಬಂಟ್ವಾಳ, ಡಿ.16 :ಹಿಂದು ಹುಡುಗಿಯ ಜೊತೆ ಮುಸ್ಲಿಂ ಯುವಕ ಬೆಂಗಳೂರು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಹಿಂದು ಸಂಘಟನೆ ಯುವಕರು ಬಸ್ ತಡೆದು ದಬಾಯಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಕಾನೂನು ಪದವಿ ಮುಗಿಸಿರುವ ಭಟ್ಕಳ ಮೂಲದ ಮುಸ್ಲಿಂ ಯುವಕ ಮತ್ತು ಆತನ ಜೊತೆಗೆ ಕಾಲೇಜು ಓದಿದ್ದಳು ಎನ್ನಲಾದ ಬಂಟ ಸಮುದಾಯದ ಮಂಗಳೂರಿನ ಹುಡುಗಿ ಬೆಂಗಳೂರು ತೆರಳುತ್ತಿದ್ದ ದುರ್ಗಾಂಬಾ ಬಸ್ಸಿನಲ್ಲಿ ಜೊತೆಗೆ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಕಾರ್ಯಕರ್ತರು ಬಸ್ ತಡೆದಿದ್ದಾರೆ. ಬಸ್ಸನ್ನು ಬಂಟ್ವಾಳದ ದಾಸಕೋಡಿ ಎಂಬಲ್ಲಿ ತಡೆದು ನಿಲ್ಲಿಸಿದ್ದು ಒಳಗಿದ್ದ ಯುವಕ - ಯುವತಿಯನ್ನು ಕೆಳಗೆ ಇಳಿಯಲು ಹೇಳಿ ಜೋರು ಮಾಡಿದ್ದಾರೆ. ಆದರೆ ಹುಡುಗಿ, ನೀವ್ಯಾರು ಕೇಳೋರು ಅಂತ ಮರು ಪ್ರಶ್ನೆ ಹಾಕಿದ್ದಾಳೆ. ಬಳಿಕ ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಬಂದು ಹುಡುಗ- ಹುಡುಗಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ.

ಠಾಣೆಯಲ್ಲಿ ದೂರು ನೀಡಲು ಸೂಚಿಸಿದಾಗ, ಯುವಕ- ಯುವತಿ ದೂರು ಬೇಡವೆಂದು ಹೇಳಿ ಹೋಗಿದ್ದಾರೆ. ಸಂಘಟನೆ ಕಾರ್ಯಕರ್ತರು ಬಸ್ ನಿಲ್ಲಿಸಿ, ಮಾತಿನ ಚಕಮಕಿ ನಡೆಸಿರುವ ವಿಡಿಯೋ ತುಣುಕು ವೈರಲ್ ಆಗಿದೆ. ಘಟನೆ ಬಗ್ಗೆ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಮಾಹಿತಿ ಪ್ರಕಾರ, ಯುವಕ- ಯುವತಿ ಹಿಂದೆ ಒಂದೇ ಕಾಲೇಜಿನಲ್ಲಿ ಓದಿದವರು ಎನ್ನಲಾಗುತ್ತಿದ್ದು ಬೆಂಗಳೂರಿಗೆ ಯಾವುದೋ ಸರ್ಟಿಫಿಕೇಟ್ ಪಡೆಯುವ ಸಲುವಾಗಿ ಜೊತೆಗೆ ಪ್ರಯಾಣಿಸುತ್ತಿದ್ದರು. ಆದರೆ ಸ್ಲೀಪರ್ ಕೋಚ್ ಬಸ್ಸಿನಲ್ಲಿ ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಜೊತೆಗಿದ್ದ ಬಗ್ಗೆ ಮಾಹಿತಿ ಪಡೆದ ಸಂಘಟನೆ ಯುವಕರು ಬಸ್ ತಡೆದು ಹೈಡ್ರಾಮಾ ನಡೆಸಿದ್ದಾರೆ. ಆದರೆ ಯುವಕರು ಯಾವುದೇ ಹಲ್ಲೆ ನಡೆಸಿಲ್ಲ ಎನ್ನುವ ಮಾಹಿತಿಯನ್ನು ಬಂಟ್ವಾಳ ಪೊಲೀಸರು ನೀಡಿದ್ದಾರೆ.
Mangalore Moral police in Private bus to bangalore, muslim youth caught with Hindu girl.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am