ಬ್ರೇಕಿಂಗ್ ನ್ಯೂಸ್
17-12-22 11:08 pm Mangalore Correspondent ಕರಾವಳಿ
ಮಂಗಳೂರು, ಡಿ.17 : ವಿದ್ಯಾರ್ಥಿ ವೇತನ, ಪದವಿ ಫಲಿತಾಂಶ ಪ್ರಕಟ ಹಾಗೂ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಒತ್ತಾಯಿಸಿ ಎನ್.ಎಸ್. ಯು.ಐ. ರಾಜ್ಯ ಮಟ್ಟದಲ್ಲಿ ಕಾಲೇಜು ಬಂದ್ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ದ.ಕ. ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷ ಸವಾದ್ ಸುಳ್ಯ, ಪದವಿ ಪರೀಕ್ಷೆ ಮುಗಿದು ಆರೇಳು ತಿಂಗಳು ಕಳೆದರೂ ಮಂಗಳೂರು ವಿವಿಯಲ್ಲಿ ಫಲಿತಾಂಶ ಪ್ರಕಟವಾಗಿಲ್ಲ. ಇದರಿಂದಾಗಿ ಮುಂದಿನ ಸೆಮಿಸ್ಟರ್ ಕಲಿಕೆಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಸರಕಾರ ಘೋಷಿಸಿರುವ ಉಚಿತ ಬಸ್ ಪಾಸ್ ಇನ್ನೂ ಜಾರಿಯಾಗಿಲ್ಲ. ಈಗ ಅವೈಜ್ಞಾನಿಕವಾಗಿ ಎನ್ಇಪಿ ನೀತಿಯನ್ನು ಜಾರಿಗೊಳಿಸಲಾಗಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು ವಿ.ವಿ. ಒಂದು ವರ್ಷದಿಂದ ಫಲಿತಾಂಶ ಪ್ರಕಟಿಸಿಲ್ಲ. ಉನ್ನತ ವ್ಯಾಸಂಗಕ್ಕೆ ಹೋಗುವವರಿಗೆ ಇದರಿಂದ ಸಮಸ್ಯೆಯಾಗಿದೆ. ಗೊಂದಲ ಬಗೆಹರಿಯುವ ಮುನ್ನವೇ ಎನ್ಇಪಿ ಜಾರಿಯಾಗುತ್ತಿದೆ ಎಂದು ಹೇಳಿದರು.
ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕು. ಸಮರ್ಪಕ ವಾಗಿ “ಅರಿವು ಸಾಲ’ ಕಲ್ಪಿಸಬೇಕು. ಕೇಂದ್ರ ಸರಕಾರ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದೆ. ಹಲವು ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನವನ್ನೇ ನಂಬಿ ವಿದ್ಯಾರ್ಜನೆ ಮಾಡುತ್ತಾರೆ. ತತ್ಕ್ಷಣ ವಿದ್ಯಾರ್ಥಿ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ, ಬಳಿಕ ಬಿಡುಗಡೆಗೊಳಿಸಿದರು. ಎನ್.ಎಸ್.ಯು.ಐ. ಮುಖಂಡರಾದ ಸುಹಾನ್ ಆಳ್ವ, ಶ್ವಾನ್ ಸಿರಿ, ಸಫಾನ್ ಕುದ್ರೋಳಿ, ಸಿರಾಜ್ ಗುದ್ರು, ಓಂಶ್ರೀ, ಸಾಹಿಲ್, ನಿಖೀಲ್ ಶೆಟ್ಟಿ, ಅಝೀಮ್, ಅಹಾ°ಫ್, ಪ್ರಜ್ವಲ್, ಆತೂಫ್ ಇದ್ದರು.
NSUI activist statewide protest against negligence of degree student result in Mangalore.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm