ಬ್ರೇಕಿಂಗ್ ನ್ಯೂಸ್
21-12-22 11:42 am Mangalore Correspondent ಕರಾವಳಿ
ಉಳ್ಳಾಲ, ಡಿ.21: 13 ಅಂತಸ್ತಿನ ಅಪಾರ್ಟ್ ಮೆಂಟ್ ಒಂದರ ಫ್ಲ್ಯಾಟ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿಯರು ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದರಿಂದ ಹಾಸಿಗೆಗೆ ಬೆಂಕಿ ಹರಡಿದ್ದು ಅಪಾರ್ಟ್ ಮೆಂಟ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಅಗ್ನಿ ಅನಾಹುತ ತಪ್ಪಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯ ಕ್ಷೇಮ ಆಸ್ಪತ್ರೆ ಬಳಿಯಿರುವ ಪ್ಲಾಮಾ ನೆಸ್ಟ್ ಅಪಾರ್ಟ್ ಮೆಂಟಿನ ಫ್ಲ್ಯಾಟ್ ಸಂಖ್ಯೆ 202 ರಲ್ಲಿ ಅಗ್ನಿ ಅನಾಹುತ ನಡೆದಿದೆ. ಫ್ಲ್ಯಾಟ್ ನಲ್ಲಿ ತಂಗಿದ್ದ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರ ಇದೆಯೆಂದು ಎಂದಿಗಿಂತ ಬೇಗನೆ ತೆರಳಿದ್ದರು. ಕಾಲೇಜಿಗೆ ತೆರಳುವ ತರಾತುರಿಯಲ್ಲಿ ವಿದ್ಯಾರ್ಥಿನಿಯರು ಬಟ್ಟೆಗಳಿಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡದೆ, ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದಾರೆ.
ಬೆಳಗ್ಗಿನಿಂದ ಅಪಾರ್ಟ್ ಮೆಂಟ್ ನಿಂದ ಹೊಗೆಯ ವಾಸನೆ ಬರುತ್ತಿರುವುದನ್ನ ಅಲ್ಲಿನ ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಗ್ರಹಿಸಿ ಕಟ್ಟಡದಲ್ಲಿ ಶೋಧ ನಡೆಸಿದ್ದಾರೆ.


ಕೆಲ ಹೊತ್ತಿನ ನಂತರ 202 ಫ್ಲ್ಯಾಟ್ ಒಳಗಿಂದ ಹೊಗೆ ಬರುತ್ತಿರುವುದು ತಿಳಿದಿದೆ. ತಕ್ಷಣ ವಿದ್ಯಾರ್ಥಿನಿಯರನ್ನ ಸ್ಥಳಕ್ಕೆ ಕರೆಸಿ ಬೀಗ ತೆರೆದು ಒಳ ನುಗ್ಗಿದಾಗ ಹಾಸಿಗೆ ಹೊತ್ತಿ ಉರಿಯುತ್ತಿರುವುದನ್ನ ಕಂಡಿದ್ದಾರೆ. ಶಫೀಕ್ ಅವರು ವಾಚ್ಮೆನ್ ಲೋಕೇಶ್ ಸಹಕಾರದಿಂದ ಫ್ಲ್ಯಾಟ್ ಬಾಲ್ಕನಿಯಿಂದ ಬೆಂಕಿ ಆವರಿಸಿದ್ದ ಹಾಸಿಗೆಯನ್ನ ಕಟ್ಟಡದ ಕೆಳಕ್ಕೆ ಎಸೆದಿದ್ದಾರೆ. ಶಫೀಕ್ ಅವರ ಸಮಯ ಪ್ರಜ್ಞೆಯಿಂದ ಕಟ್ಟಡದಲ್ಲಿದ್ದ 100ಕ್ಕೂ ಹೆಚ್ಚು ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.
Mangalore Apartment in Derlakatte catches fire after students leave the iron plugged on. A big incident has been averted after the timely presence of Flat Manager.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm