ಬ್ರೇಕಿಂಗ್ ನ್ಯೂಸ್
21-12-22 11:42 am Mangalore Correspondent ಕರಾವಳಿ
ಉಳ್ಳಾಲ, ಡಿ.21: 13 ಅಂತಸ್ತಿನ ಅಪಾರ್ಟ್ ಮೆಂಟ್ ಒಂದರ ಫ್ಲ್ಯಾಟ್ ನಲ್ಲಿದ್ದ ವೈದ್ಯಕೀಯ ವಿದ್ಯಾರ್ಥಿನಿಯರು ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದರಿಂದ ಹಾಸಿಗೆಗೆ ಬೆಂಕಿ ಹರಡಿದ್ದು ಅಪಾರ್ಟ್ ಮೆಂಟ್ ಮ್ಯಾನೇಜರ್ ಸಮಯ ಪ್ರಜ್ಞೆಯಿಂದ ಅಗ್ನಿ ಅನಾಹುತ ತಪ್ಪಿದ ಘಟನೆ ದೇರಳಕಟ್ಟೆಯಲ್ಲಿ ನಡೆದಿದೆ.
ದೇರಳಕಟ್ಟೆಯ ಕ್ಷೇಮ ಆಸ್ಪತ್ರೆ ಬಳಿಯಿರುವ ಪ್ಲಾಮಾ ನೆಸ್ಟ್ ಅಪಾರ್ಟ್ ಮೆಂಟಿನ ಫ್ಲ್ಯಾಟ್ ಸಂಖ್ಯೆ 202 ರಲ್ಲಿ ಅಗ್ನಿ ಅನಾಹುತ ನಡೆದಿದೆ. ಫ್ಲ್ಯಾಟ್ ನಲ್ಲಿ ತಂಗಿದ್ದ ದಂತ ವೈದ್ಯಕೀಯ ಕಲಿಯುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಕಾಲೇಜಿನಲ್ಲಿ ಕಾರ್ಯಾಗಾರ ಇದೆಯೆಂದು ಎಂದಿಗಿಂತ ಬೇಗನೆ ತೆರಳಿದ್ದರು. ಕಾಲೇಜಿಗೆ ತೆರಳುವ ತರಾತುರಿಯಲ್ಲಿ ವಿದ್ಯಾರ್ಥಿನಿಯರು ಬಟ್ಟೆಗಳಿಗೆ ಇಸ್ತ್ರಿ ಹಾಕಿ ಸ್ವಿಚ್ ಆಫ್ ಮಾಡದೆ, ಬಿಸಿ ಇಸ್ತ್ರಿ ಪೆಟ್ಟಿಗೆಯನ್ನ ಹಾಸಿಗೆ ಮೇಲಿಟ್ಟು ತೆರಳಿದ್ದಾರೆ.
ಬೆಳಗ್ಗಿನಿಂದ ಅಪಾರ್ಟ್ ಮೆಂಟ್ ನಿಂದ ಹೊಗೆಯ ವಾಸನೆ ಬರುತ್ತಿರುವುದನ್ನ ಅಲ್ಲಿನ ಮ್ಯಾನೇಜರ್ ಆಗಿರುವ ಕುತ್ತಾರು ನಿವಾಸಿ ಮಹಮ್ಮದ್ ಶಾಹಿದ್ ಶಫೀಕ್ ಗ್ರಹಿಸಿ ಕಟ್ಟಡದಲ್ಲಿ ಶೋಧ ನಡೆಸಿದ್ದಾರೆ.


ಕೆಲ ಹೊತ್ತಿನ ನಂತರ 202 ಫ್ಲ್ಯಾಟ್ ಒಳಗಿಂದ ಹೊಗೆ ಬರುತ್ತಿರುವುದು ತಿಳಿದಿದೆ. ತಕ್ಷಣ ವಿದ್ಯಾರ್ಥಿನಿಯರನ್ನ ಸ್ಥಳಕ್ಕೆ ಕರೆಸಿ ಬೀಗ ತೆರೆದು ಒಳ ನುಗ್ಗಿದಾಗ ಹಾಸಿಗೆ ಹೊತ್ತಿ ಉರಿಯುತ್ತಿರುವುದನ್ನ ಕಂಡಿದ್ದಾರೆ. ಶಫೀಕ್ ಅವರು ವಾಚ್ಮೆನ್ ಲೋಕೇಶ್ ಸಹಕಾರದಿಂದ ಫ್ಲ್ಯಾಟ್ ಬಾಲ್ಕನಿಯಿಂದ ಬೆಂಕಿ ಆವರಿಸಿದ್ದ ಹಾಸಿಗೆಯನ್ನ ಕಟ್ಟಡದ ಕೆಳಕ್ಕೆ ಎಸೆದಿದ್ದಾರೆ. ಶಫೀಕ್ ಅವರ ಸಮಯ ಪ್ರಜ್ಞೆಯಿಂದ ಕಟ್ಟಡದಲ್ಲಿದ್ದ 100ಕ್ಕೂ ಹೆಚ್ಚು ನಿವಾಸಿಗಳು ಅಪಾಯದಿಂದ ಪಾರಾಗಿದ್ದಾರೆ.
Mangalore Apartment in Derlakatte catches fire after students leave the iron plugged on. A big incident has been averted after the timely presence of Flat Manager.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 10:10 pm
HK News Desk
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm