ಬ್ರೇಕಿಂಗ್ ನ್ಯೂಸ್
15-10-20 10:36 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 15: ಖ್ಯಾತ ತುಳು ರಂಗಭೂಮಿ ಕಲಾವಿದ, ನಿರ್ದೇಶಕ ಮಾಧವ ಜಪ್ಪುಪಟ್ನ (64) ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.
ಆರೋಗ್ಯದಲ್ಲಿ ಸದೃಢರಾಗಿದ್ದ ಮಾಧವರಿಗೆ ಎರಡು ವಾರಗಳ ಹಿಂದೆ ಜ್ವರ ಬಂದಿತ್ತು. ಜ್ವರದ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಅವರು ಇಬ್ಬರು ಪುತ್ರರು, ಪತ್ನಿ ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
40ಕ್ಕೂ ಹೆಚ್ಚು ನಾಟಕ ಕೃತಿಗಳನ್ನು ಬರೆದಿದ್ದ ಮಾಧವ ಜಪ್ಪುಪಟ್ನ ಅಭಿನಯದ ಜೊತೆಗೆ ನಿರ್ದೇಶನ, ಗಾಯನವನ್ನು ಮಾಡುತ್ತಿದ್ದರು. 90ರ ದಶಕದಲ್ಲಿ ಅಸಂಖ್ಯಾತ ಹೊಸ ಕಲಾವಿದರಿಗೆ ತಮ್ಮ ನಾಟಕದಲ್ಲಿ ಅವಕಾಶ ನೀಡಿ, ರಂಗಭೂಮಿಗೆ ಪರಿಚಯ ಮಾಡಿದ್ದರು. ಅವರು ಬರೆದು, ನಿರ್ದೇಶಿಸಿದ 'ಬಂಗಾರ್ ಕಂಡನಿ' ಎನ್ನುವ ನಾಟಕ 150ಕ್ಕೂ ಹೆಚ್ಚು ಪ್ರದರ್ಶನ ಕಂಡಿತ್ತು. 'ಈ ಬಲ್ಲ್ ಯಾವ' ಎನ್ನುವ ನಾಟಕ ಅವರಿಗೆ ಜನಪ್ರಿಯತೆ ತಂದುಕೊಟ್ಟಿತ್ತು. ನಾಟಕದಲ್ಲಿ ಹಾಸ್ಯ ಕಲಾವಿದರಾಗಿ ಜನಮನ್ನಣೆ ಗಳಿಸಿದ್ದರು. ಇತ್ತೀಚೆಗೆ ತುಳು ಸಿನಿಮಾದಲ್ಲೂ ಅಭಿನಯಿಸಿದ್ದ ಮಾಧವ ಅವರು, ಬಂಗಾರ್ ಪಟ್ಲೇರ್ ಚಿತ್ರದಲ್ಲೂ ಅಭಿನಯಿಸಿದ್ದರು.
ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದ ಮೊಕ್ತೇಸರರಾಗಿದ್ದ ಮಾಧವ ಜೆಪ್ಪುಪಟ್ನ, ಶ್ರೀ ಭಗವತೀ ತೀಯಾ ಸೇವಾ ಸಂಘ, ನವನಿಧಿ ಸಹಕಾರಿ ಬ್ಯಾಂಕಿನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯ ಪ್ರಶಸ್ತಿ ಒಳಗೊಂಡಂತೆ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳನ್ನು ಪಡೆದಿದ್ದರು.
Mangalore Renowned Tulu artist Jeepu Patna passes away at 64 after being tested corona positive. Jeepu Patna was a singer, author and a great artist in the Tulu drama industry.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm