ಬ್ರೇಕಿಂಗ್ ನ್ಯೂಸ್
24-12-22 11:18 am Mangalore Correspondent ಕರಾವಳಿ
ಉಳ್ಳಾಲ, ಡಿ.24: ಸ್ಕೂಟರ್ ಗೆ ಡಿಕ್ಕಿ ಹೊಡೆದು ಪರಾರಿಯಾಗುತ್ತಿದ್ದ ಕಾರನ್ನು ತಡೆದ ಸಾರ್ವಜನಿಕರು ಆರೋಪಿ ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಶುಕ್ರವಾರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದಲ್ಲಿ ನಡೆದಿದೆ.
ಕೇರಳ ಮೂಲದ ಕಾರು ಮತ್ತು ಅದರ ಚಾಲಕ ಅಹಮ್ಮದ್ ಮುಬಾರಿಷ್ ಎ.ಕೆ ಎಂಬಾತನನ್ನು ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಹಮ್ಮದ್ ಮುಬಾರಿಷ್ ಶುಕ್ರವಾರ ಸಂಜೆ ಕಾರಿನಲ್ಲಿ ಮಂಗಳೂರಿಂದ ಕೇರಳದ ಕಡೆಗೆ ಅತಿ ವೇಗದಿಂದ ಧಾವಿಸುತ್ತಿದ್ದ ಎನ್ನಲಾಗಿದ್ದು ರಾ.ಹೆ. 66ರ ಕೋಟೆಕಾರು ಹೆದ್ದಾರಿಯಲ್ಲಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯಾದ ರಭಸಕ್ಕೆ ಇರಾನ್ ಮೂಲದ ವಿದ್ಯಾರ್ಥಿಗಳು ಚಲಾಯಿಸುತ್ತಿದ್ದ ಸ್ಕೂಟರ್ ರಸ್ತೆಗಪ್ಪಳಿಸಿದ್ದು ಮಹಿಳಾ ಸವಾರೆ ಸೆಟಿದ್ಹೆ ಬಾಷಾಂಗ್(28) ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ದಾಖಲಿಸಿದ್ದು ಸಹ ಸವಾರ ಅಲಿಯಸ್ಗರ್ ರಹಿಮಾನ್ ಡೌಸ್ಟ್(30) ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.


ಇರಾನ್ ಮೂಲದ ಸೆಟಿದ್ಹೆ ಬಾಷಾಂಗ್ ಮತ್ತು ಅಲಿಯಸ್ಗರ್ ರಹಿಮಾನ್ ಮಂಗಳೂರು ವಿವಿಯಲ್ಲಿ ಉನ್ನತ ವ್ಯಾಸಂಗಕ್ಕೆ ಬಂದಿದ್ದು ದೇರಳಕಟ್ಟೆಯ ಲಾಡ್ಜ್ ನಲ್ಲಿ ತಂಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಚಾಲಕ ಮುಬಾರಿಷ್ ಕಾರು ಡಿಕ್ಕಿ ಹೊಡೆದ ಬಳಿಕ ಕಾರಿನಲ್ಲಿದ್ದ ಯುವತಿಯನ್ನು ತಲಪಾಡಿಯಲ್ಲಿ ಇಳಿಸಿ ಕಾರನ್ನು ದೇವಿಪುರದ ಒಳ ರಸ್ತೆಯಿಂದ ಓಡಿಸಿ ಪರಾರಿಗೆ ಯತ್ನಿಸಿದ್ದು ಆತನನ್ನ ಬೆನ್ನಟ್ಟಿದ ಸಾರ್ವಜನಿಕರು ದೇವಿಪುರ ಮಂಡೆ ಕಟ್ಟ ಎಂಬಲ್ಲಿ ತಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.
Ullal accident, hit and run Car rams over bike, Irani students injured in Mangalore
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm