ಬ್ರೇಕಿಂಗ್ ನ್ಯೂಸ್
16-10-20 12:45 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 16 : ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ತುಳು ರಾಷ್ಟ್ರ ಭಾಷೆ. ಇಲ್ಲಿ ಬಂದ ಯಾವುದೇ ಉತ್ತರ ಭಾರತೀಯನೇ ಆದರೂ ಒಂದು ತಿಂಗಳಲ್ಲಿ ತುಳು ಕಲಿಯುತ್ತಾನೆ ಎನ್ನುವ ಮಾತಿದೆ. ಇದಕ್ಕಾಗೇ ತುಳುವನ್ನು ಮಂಗಳೂರಿನ ಮಂದಿಯ ರಾಷ್ಟ್ರ ಭಾಷೆ ಅಂತ ಕೆಲವರು ಟೀಕಿಸುತ್ತಾರೆ. ಕರಾವಳಿಗರ ಪ್ರೀತಿಯ ತುಳು ಭಾಷೆಗೂ ಸಮೃದ್ಧ ಇತಿಹಾಸ ಇದೆ, ಸಾಹಿತ್ಯ, ಪರಂಪರೆ, ಸ್ವಂತ ಲಿಪಿಯೂ ಇದೆ ಎನ್ನುವುದು ಹೆಚ್ಚಿನ ಮಂದಿಗೆ ತಿಳಿದಿಲ್ಲ. ಆದರೆ, ತುಳು ಲಿಪಿ ಪ್ರಚಲಿತದಲ್ಲಿ ಮಾತ್ರ ಇಲ್ಲ.
ಹೀಗಾಗಿ ತುಳು ಲಿಪಿಗೆ ಸರಕಾರ ಪ್ರೋತ್ಸಾಹ ನೀಡಬೇಕು, ಭಾಷೆಯನ್ನು ಉತ್ತೇಜಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬ ಬೇಡಿಕೆಯೂ ಕರಾವಳಿಯಲ್ಲಿದೆ. ಇದೇ ವೇಳೆ, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಈ ನಿಟ್ಟಿನಲ್ಲಿ ಹೊಸ ಉಪಕ್ರಮಕ್ಕೆ ಮುಂದಾಗಿದ್ದಾರೆ. ತಮ್ಮ ಮಂಗಳೂರಿನ ಕಚೇರಿಯಲ್ಲಿ ತುಳು ಲಿಪಿಯಲ್ಲಿ ನಾಮಫಲಕ ಹಾಕಿದ್ದು ತುಳುವರ ಪ್ರೀತಿಗೆ ಪಾತ್ರರಾಗಿದ್ದಾರೆ.
ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬಳಕೆಯಲ್ಲಿದೆ. ಇಲ್ಲಿನ ಜನರಿಗೆ ಆಡು ಭಾಷೆ ಮತ್ತು ವ್ಯಾವಹಾರಿಕ ಭಾಷೆ ತುಳುವೇ ಆಗಿದೆ. ಈಗೀಗ ತುಳು ಭಾಷೆಯ ಬಗ್ಗೆ ಬಹಳಷ್ಟು ಕೆಲಸಗಳಾಗುತ್ತಿವೆ. ಸಾಹಿತ್ಯ ರಚನೆ, ತುಳು ಸಂಘಟನೆಗಳು ಹುಟ್ಟಿಕೊಂಡಿವೆ. ಆದರೆ, ತುಳು ಲಿಪಿಯ ಬಳಕೆ ಮಾತ್ರ ತೀರಾ ಕಡಿಮೆಯಿದ್ದು, ಬೆರಳೆಣಿಕೆಯ ಜನರು ಮಾತ್ರ ತುಳು ಲಿಪಿ ಬಲ್ಲವರಿದ್ದಾರೆ. ಆದರೆ ಇತ್ತೀಚೆಗೆ ತುಳು ಲಿಪಿಯ ವಿಚಾರದಲ್ಲಿ ಯುವಜನರು ಎಚ್ಚೆತ್ತುಕೊಂಡಿದ್ದು, ತುಳು ಸಂಘಟನೆಗಳ ಜೊತೆ ಸೇರಿ ಕಾರ್ಯಕ್ರಮ ರೂಪಿಸುತ್ತಿದ್ದಾರೆ. ಇವುಗಳಲ್ಲಿ ತುಳು ಲಿಪಿ ಕಲಿಕೆ ಕೂಡ ಒಂದು.
ಇಂಥ ಕಾರ್ಯಕ್ರಮಗಳಿಗೆ ಪೂರಕವಾಗಿ ಮಂಗಳೂರು ನಗರದ ಶಾಸಕ ವೇದವ್ಯಾಸ ಕಾಮತ್, ತಮ್ಮ ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಸುವ ಲಿಪಿಯ ಬಗ್ಗೆ ಉತ್ತೇಜಿಸುವ ಕೆಲಸ ಮಾಡಿದ್ದಾರೆ. ಇದರ ಜೊತೆಗೆ ಪ್ರೊಮೋಟ್ ತುಳು ಎಂದು ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಶಾಸಕರ ನೆಲೆಯಲ್ಲಿ ವೇದವ್ಯಾಸ ಕಾಮತ್ ಅವರ ಉತ್ತೇಜನಕಾರಿ ಕಾರ್ಯಕ್ಕೆ ತುಳುವರು ಮೆಚ್ಚಿಕೊಂಡಿದ್ದಾರೆ.
In order to promote Tulu Lipi Mangalore MLA Vedavyas kamath aspires by designing his official lettehead and Name Board in Tulu Lipi.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm