ಬ್ರೇಕಿಂಗ್ ನ್ಯೂಸ್
16-10-20 12:45 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 16 : ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ತುಳು ರಾಷ್ಟ್ರ ಭಾಷೆ. ಇಲ್ಲಿ ಬಂದ ಯಾವುದೇ ಉತ್ತರ ಭಾರತೀಯನೇ ಆದರೂ ಒಂದು ತಿಂಗಳಲ್ಲಿ ತುಳು ಕಲಿಯುತ್ತಾನೆ ಎನ್ನುವ ಮಾತಿದೆ. ಇದಕ್ಕಾಗೇ ತುಳುವನ್ನು ಮಂಗಳೂರಿನ ಮಂದಿಯ ರಾಷ್ಟ್ರ ಭಾಷೆ ಅಂತ ಕೆಲವರು ಟೀಕಿಸುತ್ತಾರೆ. ಕರಾವಳಿಗರ ಪ್ರೀತಿಯ ತುಳು ಭಾಷೆಗೂ ಸಮೃದ್ಧ ಇತಿಹಾಸ ಇದೆ, ಸಾಹಿತ್ಯ, ಪರಂಪರೆ, ಸ್ವಂತ ಲಿಪಿಯೂ ಇದೆ ಎನ್ನುವುದು ಹೆಚ್ಚಿನ ಮಂದಿಗೆ ತಿಳಿದಿಲ್ಲ. ಆದರೆ, ತುಳು ಲಿಪಿ ಪ್ರಚಲಿತದಲ್ಲಿ ಮಾತ್ರ ಇಲ್ಲ.
ಹೀಗಾಗಿ ತುಳು ಲಿಪಿಗೆ ಸರಕಾರ ಪ್ರೋತ್ಸಾಹ ನೀಡಬೇಕು, ಭಾಷೆಯನ್ನು ಉತ್ತೇಜಿಸಲು ಕ್ರಮ ತೆಗೆದುಕೊಳ್ಳಬೇಕು ಎಂಬ ಬೇಡಿಕೆಯೂ ಕರಾವಳಿಯಲ್ಲಿದೆ. ಇದೇ ವೇಳೆ, ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಈ ನಿಟ್ಟಿನಲ್ಲಿ ಹೊಸ ಉಪಕ್ರಮಕ್ಕೆ ಮುಂದಾಗಿದ್ದಾರೆ. ತಮ್ಮ ಮಂಗಳೂರಿನ ಕಚೇರಿಯಲ್ಲಿ ತುಳು ಲಿಪಿಯಲ್ಲಿ ನಾಮಫಲಕ ಹಾಕಿದ್ದು ತುಳುವರ ಪ್ರೀತಿಗೆ ಪಾತ್ರರಾಗಿದ್ದಾರೆ.

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬಳಕೆಯಲ್ಲಿದೆ. ಇಲ್ಲಿನ ಜನರಿಗೆ ಆಡು ಭಾಷೆ ಮತ್ತು ವ್ಯಾವಹಾರಿಕ ಭಾಷೆ ತುಳುವೇ ಆಗಿದೆ. ಈಗೀಗ ತುಳು ಭಾಷೆಯ ಬಗ್ಗೆ ಬಹಳಷ್ಟು ಕೆಲಸಗಳಾಗುತ್ತಿವೆ. ಸಾಹಿತ್ಯ ರಚನೆ, ತುಳು ಸಂಘಟನೆಗಳು ಹುಟ್ಟಿಕೊಂಡಿವೆ. ಆದರೆ, ತುಳು ಲಿಪಿಯ ಬಳಕೆ ಮಾತ್ರ ತೀರಾ ಕಡಿಮೆಯಿದ್ದು, ಬೆರಳೆಣಿಕೆಯ ಜನರು ಮಾತ್ರ ತುಳು ಲಿಪಿ ಬಲ್ಲವರಿದ್ದಾರೆ. ಆದರೆ ಇತ್ತೀಚೆಗೆ ತುಳು ಲಿಪಿಯ ವಿಚಾರದಲ್ಲಿ ಯುವಜನರು ಎಚ್ಚೆತ್ತುಕೊಂಡಿದ್ದು, ತುಳು ಸಂಘಟನೆಗಳ ಜೊತೆ ಸೇರಿ ಕಾರ್ಯಕ್ರಮ ರೂಪಿಸುತ್ತಿದ್ದಾರೆ. ಇವುಗಳಲ್ಲಿ ತುಳು ಲಿಪಿ ಕಲಿಕೆ ಕೂಡ ಒಂದು.
ಇಂಥ ಕಾರ್ಯಕ್ರಮಗಳಿಗೆ ಪೂರಕವಾಗಿ ಮಂಗಳೂರು ನಗರದ ಶಾಸಕ ವೇದವ್ಯಾಸ ಕಾಮತ್, ತಮ್ಮ ಕಚೇರಿಯಲ್ಲಿ ತುಳು ಲಿಪಿಯ ನಾಮಫಲಕ ಅಳವಡಿಸುವ ಲಿಪಿಯ ಬಗ್ಗೆ ಉತ್ತೇಜಿಸುವ ಕೆಲಸ ಮಾಡಿದ್ದಾರೆ. ಇದರ ಜೊತೆಗೆ ಪ್ರೊಮೋಟ್ ತುಳು ಎಂದು ಫೇಸ್ಬುಕ್ ಪೇಜ್ನಲ್ಲಿ ಬರೆದುಕೊಂಡಿದ್ದಾರೆ. ಶಾಸಕರ ನೆಲೆಯಲ್ಲಿ ವೇದವ್ಯಾಸ ಕಾಮತ್ ಅವರ ಉತ್ತೇಜನಕಾರಿ ಕಾರ್ಯಕ್ಕೆ ತುಳುವರು ಮೆಚ್ಚಿಕೊಂಡಿದ್ದಾರೆ.
In order to promote Tulu Lipi Mangalore MLA Vedavyas kamath aspires by designing his official lettehead and Name Board in Tulu Lipi.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm