ಬ್ರೇಕಿಂಗ್ ನ್ಯೂಸ್
29-12-22 02:37 pm Udupi Correspondent ಕರಾವಳಿ
ಉಡುಪಿ, ಡಿ 29: ಕೃಷ್ಣಪುರ ಮಠದ ಕಟ್ಟಡದಲ್ಲಿರುವ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ಧ ಬಹುಕೋಟಿ ವಂಚನೆ ಆರೋಪ ಕೇಳಿ ಬಂದಿದ್ದು, ಬ್ಯಾಂಕ್ ನಿರ್ದೇಶಕ ಬಿ.ವಿ ಲಕ್ಷ್ಮೀನಾರಾಯಣ ಈಗ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಉಡುಪಿಯಲ್ಲಿ ಬಹುಕೋಟಿ ಹಣ ವಂಚನೆ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಲಕ್ಷ್ಮೀನಾರಾಯಣ ಉಪಾಧ್ಯಾಯ ತಲೆಮರೆಸಿಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಉಡುಪಿ ಜೆಎಂಎಫ್ಸಿ ಕೋರ್ಟ್ನ ಪ್ರಧಾನ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಮುಂದೆ ಪೊಲೀಸರು ಹಾಜರುಪಡಿಸಿದ್ದು, ಜನವರಿ 11ರ ವರೆಗೆ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಲಾಗಿದೆ.

ಸುಮಾರು 600 ಠೇವಣಿದಾರರ 93 ಕೋಟಿ ರೂಪಾಯಿ ವಂಚನೆ ಆರೋಪ ಇವರ ಮೇಲಿದೆ. 48 ಕೋಟಿ ರೂಪಾಯಿ ಠೇವಣಿ ಬಾಕಿಯಿದೆ ಎಂದು ನಿರ್ದೇಶಕ ಲಕ್ಷ್ಮೀನಾರಾಯಣ ಹೇಳಿದ್ದಾರೆಂದು ಹೇಳಲಾಗಿದೆ.


ಬ್ಯಾಂಕ್ಗೆ ಮುತ್ತಿಗೆ ಹಾಕಿದ್ದ ಗ್ರಾಹಕರು
ಕಳೆದ ಜೂನ್ ತಿಂಗಳಿಂದ ಗ್ರಾಹಕರಿಗೆ ಯಾವುದೇ ಬಡ್ಡಿ ನೀಡಿಲ್ಲ. ಅಸಲು ಕೇಳಿದರೂ ನೀಡಿಲ್ಲ ಎಂದು ಆರೋಪಿಸಿ ಡಿಸೆಂಬರ್ ೧೯ರಂದು ಗ್ರಾಹಕರು ಬ್ಯಾಂಕ್ ಒಳ ನುಗ್ಗಿ ಪ್ರತಿಭಟಿಸಿದ್ದರು. ಅಲ್ಲದೆ, ಸಿಬ್ಬಂದಿ ಮೇಲೆ ಗಲಾಟೆ ಮಾಡಿದ್ದರು. ಈ ವೇಳೆ ಮಹಿಳಾ ಸಿಬ್ಬಂದಿಯನ್ನು ಗ್ರಾಹಕರು ತರಾಟೆಗೆ ತೆಗೆದುಕೊಂಡಿದ್ದರು. ಗ್ರಾಹಕರ ಒತ್ತಡದಿಂದ ನೊಂದ ಮಹಿಳಾ ಸಿಬ್ಬಂದಿ ಬ್ಯಾಗ್ನಲ್ಲಿದ್ದ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಗ್ರಾಹಕರೇ ತಪ್ಪಿಸಿದ್ದರು.
ಸ್ಥಳಕ್ಕೆ ಉಡುಪಿ ನಗರ ಠಾಣೆ ಪೊಲೀಸರು ಆಗಮಿಸಿ ದೂರು ದಾಖಲಿಸಿಕೊಂಡಿದ್ದರು. ವಿವಿಧ ಸೊಸೈಟಿ ಮತ್ತು ಗ್ರಾಹಕರಿಂದ 100 ಕೋಟಿಗೂ ಅಧಿಕ ಠೇವಣಿ ಸಂಗ್ರಹಿಸಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಗ್ರಾಹಕರ ಠೇವಣಿ ಹಣವನ್ನು ಹಲವು ಕಡೆ ಹೂಡಿಕೆ ಮಾಡಿ ಸೊಸೈಟಿ ನಷ್ಟ ಹೊಂದಿದೆ ಎಂದು ಹೇಳಲಾಗಿದೆ.


ಸಹಕಾರ ಬ್ಯಾಂಕ್ಗಳ ಅವ್ಯವಹಾರ
ಬೆಂಗಳೂರಿನಲ್ಲಿ ಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್, ವಶಿಷ್ಠ ಕೋಆಪರೇಟಿವ್ ಬ್ಯಾಂಕ್ ಹಾಗೂ ಸಿರಿ ವೈಭವ ಪತ್ತಿನ ಸಹಕಾರಿ ಬ್ಯಾಂಕ್ ಮತ್ತು ಶುಶೃತಿ ಕೋಆಪರೇಟಿವ್ ಬ್ಯಾಂಕ್, ಯಾದಗಿರಿಯ ಶ್ರೀ ರೇವಣಸಿದ್ದೇಶ್ವರ ವಿವಿಧೋದ್ದೇಶ ಸಹಕಾರ ಸಂಘ ನಿ. ಬ್ಯಾಂಕ್ಗಳಲ್ಲಿ ಈಗಾಗಲೇ ವಂಚನೆಯಾಗಿದ್ದು, ಈ ಸಾಲಿಗೆ ಈಗ ಕಮಲಾಕ್ಷಿ ವಿವಿದ್ಧೋದ್ದೇಶ ಸಹಕಾರಿ ಸಂಘವು ಸೇರಿಕೊಂಡಂತಾಗಿದೆ.
ಠೇವಣಿದಾರರು ಲಕ್ಷ್ಮೀನಾರಾಯಣ ವಿರುದ್ಧ ದೂರು ನೀಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಸರ್ಜ್ ವಾರೆಂಟ್ ಪಡೆದ ಪೊಲೀಸರು ವಾರದ ಹಿಂದಷ್ಟೇ ಸೊಸೈಟಿ ಬಾಗಿಲು ತೆರೆದು ತಪಾಸಣೆ ನಡೆಸಿದ್ದರು. ಕೀ ಮೇಕರ್ ಅವರನ್ನು ಕರೆಸಿ ಸೊಸೈಟಿ ಲಾಕರ್ ಬಾಗಿಲು ತೆರೆದು ಬೇಕಾದ ಅಗತ್ಯ ಮಾಹಿತಿ ಸಂಗ್ರಹಿಸಲಾಗಿತ್ತು. ಕಂಪ್ಯೂಟರ್ ಜಾಲಾಡಿದ ಪೊಲೀಸರು ಅಲ್ಲಿಂದ ಕೆಲ ಮಾಹಿತಿ, ದಾಖಲೆಗಳನ್ನು ಪರಿಶೀಲಿಸಿ ವಶಕ್ಕೆ ಪಡೆದುಕೊಂಡಿದ್ದರು. ಸೊಸೈಟಿಗೆ ಬೀಗ ಜಡಿದು ಸೀಲ್ ಮಾಡಿದ್ದರು.
Udupi Absconding Kamalakshi Cooperative Society chairman Lakshminarayan arrested in fraud case. Udupi CEN police have arrested B V Laxminarayana, chairman of the Kamalakshi Cooperative Society on charges of siphoning of crores of rupees. He is now being taken for further interrogation. The police took him into custody at Matapadi near Brahmavar, police sources said. A case of cheating has been registered.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm