ಬ್ರೇಕಿಂಗ್ ನ್ಯೂಸ್
31-12-22 01:03 pm Udupi Correspondent ಕರಾವಳಿ
ಉಡುಪಿ, ಡಿ.31 : ಇಲ್ಲಿನ ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ, ಮೂಕಾಂಬಿಕಾ ಅಮ್ಮನವರ ಸನ್ನಿಧಿಯಲ್ಲಿ ಕಾಣಿಕೆ ಡಬ್ಬಿ ಕಳವುಗೈದಿದ್ದ ಕಳ್ಳ ಮೂರು ತಿಂಗಳ ನಂತರ ಸಿಕ್ಕಿಬಿದ್ದಿದ್ದಾನೆ.
ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಕಳವಾಗಿದ್ದ ಸೆ.6ರ ದಿನವೇ ಮಲ್ಪೆ ಪೊಲೀಸ್ ಠಾಣೆಗೆ ದೂರನ್ನು ನೀಡಿತ್ತು. ಆಡಳಿತ ಮಂಡಳಿ, ಹತ್ತು ಸಮಸ್ತರು ಮಾರನೇ ದಿನ ಮತ್ತು ನವರಾತ್ರಿ ಉತ್ಸವದ ಸಂದರ್ಭ ಬಬ್ಬು ಸ್ವಾಮಿಯ ದರ್ಶನ ಸೇವೆಯನ್ನು ಮಾಡಿಸಿ ಕಳವಿನ ಬಗ್ಗೆ ದೂರು ನೀಡಿದ್ದರು. ದೈವವು ನೇಮೋತ್ಸವದ ಒಳಗಡೆ ಕಾಣಿಕೆ ಡಬ್ಬಿ ಕದ್ದ ವ್ಯಕ್ತಿಯನ್ನು ದೈವಸ್ಥಾನದ ಎದುರಲ್ಲಿ ನಿಲ್ಲಿಸುವುದಾಗಿ ಅಭಯ ನೀಡಿತ್ತು.
ಡಿ. 28ರಂದು ಮಲ್ಪೆ ಠಾಣಾಧಿಕಾರಿ ಗುರುನಾಥ್ ಬಿ. ಹಾದಿಮನಿ, ಪಿಎಸ್ಐ ಸುಷ್ಮಾ ಹಾಗೂ ರವಿ ಜಾಧವ್ ಆರೋಪಿ ಹರ್ಷಿತ್ ಎಂಬವನನ್ನು ಬೈಂದೂರಿನಲ್ಲಿ ಬಂಧಿಸಿ ದೈವಸ್ಥಾನಕ್ಕೆ ಕರೆತಂದಿದ್ದಾರೆ. ಇದೇ ವ್ಯಕ್ತಿ ಜಿಲ್ಲೆಯಲ್ಲಿ ಹಲವಾರು ಕಡೆ ದೇವಸ್ಥಾನಗಳಲ್ಲಿ ಕಳ್ಳತನ ಎಸಗಿದ್ದಾನೆಂದು ವಿಚಾರಣೆಯ ವೇಳೆ ಬಾಯಿ ಬಿಟ್ಟಿದ್ದಾನೆ. ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹಿರಿಯಡ್ಕ ಜೈಲಿನಲ್ಲಿರಿಸಲಾಗಿದೆ. ದೈವದ ಅಭಯದ ನುಡಿ ಸತ್ಯವಾಗಿದೆ ಎಂದು ಆಡಳಿತ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ಶೆಟ್ಟಿ ತಿಳಿಸಿದ್ದಾರೆ.
Udupi Thief who stole offering boxes from Babbuswami temple caught after three months.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm