ಬ್ರೇಕಿಂಗ್ ನ್ಯೂಸ್
02-01-23 03:10 pm Mangalore Correspondent ಕರಾವಳಿ
ಮಂಗಳೂರು, ಜ.2 : ರಾತ್ರಿ ಹೊತ್ತಿನಲ್ಲಿ ಅಧಿಕಾರಿಗಳ ಹಾಗೂ ಪೊಲೀಸ್ ಇಲಾಖೆಯ ಕೃಪಾಕಟಾಕ್ಷದಿಂದಲೇ ಜಿಲ್ಲೆಯಾದ್ಯಂತ ಅಕ್ರಮ ಮರಳು ಸಾಗಾಟದ ದಂಧೆ ನಡೆಯುತ್ತಿದೆ. ಇದರಿಂದಾಗಿ ಕೋಟ್ಯಂತರ ರುಪಾಯಿ ತೆರಿಗೆ ಹಣ ಸರಕಾರಕ್ಕೆ ನಷ್ಟ ಆಗುತ್ತಿದೆ ಎಂದು ದಕ್ಷಿಣ ಕನ್ನಡ ಸಿವಿಲ್ ಗುತ್ತಿಗೆದಾರರ ಸಂಘ ಆರೋಪಿಸಿದೆ.
ಮಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಉಪಾಧ್ಯಕ್ಷ ದಿನಾಕರ್ ಸುವರ್ಣ, ರಾತ್ರಿ ಹೊತ್ತಿನಲ್ಲಿ ಅಧಿಕಾರಿಗಳ ಹೊಂದಾಣಿಕೆಯಿಂದ ಮರಳು ಸಿಗುತ್ತದೆ. ಪೊಲೀಸ್ ಅಧಿಕಾರಿಗಳಿಗೆ ಯಾವ ಲಾರಿಗಳನ್ನು ವಶಕ್ಕೆ ಪಡೆಯಬಾರದೆಂದು ಸೂಚನೆ ಇದೆ. ಹಗಲು ಹೊತ್ತಿನಲ್ಲಿ ಮರಳು ಸಾಗಾಟ ಮಾಡಿದ್ರೆ, ಕೆಲವರು ಪ್ರಶ್ನೆ ಮಾಡುತ್ತಾರೆ. ಹಾಗಾಗಿ ರಾತ್ರಿ ಹೊತ್ತಿನಲ್ಲೇ ಅಕ್ರಮ ಮರಳು ಸಾಗಾಟ ಆಗುತ್ತದೆ. ಮೊದಲು ಇದು ವೃತ್ತಿಯಾಗಿತ್ತು, ಇದೀಗ ಕಳ್ಳದಂಧೆಯಾಗಿ ಮಾರ್ಪಟ್ಟಿದೆ. ಇದರಿಂದ ಗಣಿ ಇಲಾಖೆಗೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ ಎಂದು ಹೇಳಿದರು.
ಸಂಘದ ಅಧ್ಯಕ್ಷ ಮಹಾಬಲ ಕೊಟ್ಟಾರಿ ಮಾತನಾಡಿ, ಕಳೆದ ಎರಡು ವಾರಗಳಿಂದ ಕಟ್ಟಡ ನಿರ್ಮಾಣಕ್ಕೆ ಉಪಯೋಗಿಸುವ ಕ್ರಷರ್ ಜಲ್ಲಿಯ ಪೂರೈಕೆ ಸ್ಥಗಿತಗೊಂಡಿದೆ. ಜಲ್ಲಿಯ ಲಭ್ಯತೆಯಿಲ್ಲದ ಕಾರಣ ಗುತ್ತಿಗೆದಾರರು ಕಟ್ಟಡ ಕಾಮಗಾರಿಗಳನ್ನು ನಡೆಸಲಾಗದ ಸ್ಥಿತಿಯಲ್ಲಿದ್ದಾರೆ. ಇದರಿಂದ ಉತ್ತರ ಭಾರತದಿಂದ ಬಂದು ನೆಲೆ ಕಂಡುಕೊಂಡ ಕೂಲಿ ಕಾರ್ಮಿಕರಿಗೆ ಕೆಲಸ ನೀಡಲಾರದ ಪರಿಸ್ಥಿತಿ ತಲೆದೋರಿದೆ. ಇದಲ್ಲದೆ, ಅಕ್ರಮ ದಂಧೆಕೋರರಿಂದ ದುಪ್ಪಟ್ಟು ಹಣ ಕೊಟ್ಟು ಮರಳು ಪಡೆಯಬೇಕಾಗಿದೆ. ಇದರಿಂದ ಜನಸಾಮಾನ್ಯರಿಗೂ ನಷ್ಟ, ನಮಗೂ ನಷ್ಟವಾಗಿದೆ ಎಂದು ದೂರಿದರು.
ನಿರ್ಮಾಣ ಕಾಮಗಾರಿಗಳಿಗೆ ಕ್ರಷರ್ ಜಲ್ಲಿಯನ್ನು ಪೂರೈಸುವ ಪೂರೈಕೆದಾರರು, ಸರ್ಕಾರದ ನೀತಿ, ನಿಯಮಾವಳಿ ಮತ್ತು ಧೋರಣೆಯಿಂದ ಕ್ರಷರ್ ನಡೆಸಲು ತೊಂದರೆ ಎದುರಿಸುತ್ತಿದ್ದಾರೆ. ಜಿಲ್ಲೆಯಾದ್ಯಂತ ಅನೇಕ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯುತ್ತಿದ್ದು, ರಾಜ್ಯದ ಮಾತ್ರವಲ್ಲದೆ, ಹೊರ ರಾಜ್ಯಗಳ ಲಕ್ಷಾಂತರ ಮಂದಿ ಕೂಲಿ ಕಾರ್ಮಿಕರು ದುಡಿಯುತ್ತಿದ್ದು, ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿದ್ದಾರೆ. ಇದೀಗ ಎರಡು ವಾರಗಳಿಂದ ಜಲ್ಲಿಯ ಪೂರೈಕೆ ಸ್ಥಗಿತಗೊಂಡು ನಿರ್ಮಾಣ ಕಾಮಗಾರಿಗಳು ಅರ್ಧದಲ್ಲಿ ನಿಂತು ಹೋಗಿದೆ. ಹೀಗಾಗಿ ಸಾವಿರಾರು ಕುಟುಂಬಗಳು ಬೀದಿ ಪಾಲಾಗುವ ಸಂಭವವಿದೆ. ಈ ಸಮಸ್ಯೆಯನ್ನು ಶೀಘ್ರ ಪರಿಹಾರ ಕಾಣದಿದ್ದರೆ, ಕಾರ್ಮಿಕರನ್ನೊಗೊಂಡು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಸತೀಶ್ ಕುಮಾರ್ ಜೋಗಿ, ಕಾರ್ಯದರ್ಶಿ ದೇವಾನಂದ, ಟ್ರಸ್ಟಿ ಸುರೇಶ್ ಉಪಸ್ಥಿತರಿದ್ದರು.
Mangalore Illegal sand mining is still active, DK Civil contractors association slam police department.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am