ಬ್ರೇಕಿಂಗ್ ನ್ಯೂಸ್
02-01-23 05:34 pm Mangalore Correspondent ಕರಾವಳಿ
ಮಂಗಳೂರು, ಜ.2: ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಅವರಿಗೆ ಯಾರೋ ಅಪರಿಚಿತರು ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಫೋನ್ ಮಾಡಿ ಯಾಮಾರಿಸಲು ಯತ್ನಿಸಿದ್ದಾನೆ. ಈ ಬಗ್ಗೆ ತಿಳಿಯುತ್ತಲೇ ಯುಟಿ ಖಾದರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ನಕಲಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಲು ಕೋರಿದ್ದಾರೆ. ಪೊಲೀಸರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಮಧ್ಯಾಹ್ನ ಯುಟಿ ಖಾದರ್ ಅವರ ಮೊಬೈಲ್ ಸಂಖ್ಯೆಗೆ 8146006626 ನಂಬರಿನಿಂದ ಕರೆ ಬಂದಿತ್ತು. ಎರಡು ಬಾರಿ ಫೋನ್ ಕರೆ ಬಂದಿದ್ದರಿಂದ ಸಭೆಯಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಲು ಆಗಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡಿದಾಗ, ಅದೇ ನಂಬರಿನಿಂದ ಸಂದೇಶ ಬಂದಿತ್ತು. Good afternoon this side kaniskha singh pa to shri rahul Gandhi ji call me ಎಂದು ಸಂದೇಶ ಬರೆಯಲಾಗಿತ್ತು. ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದುಬಂದಿದೆ.
ಈ ಕುರಿತು ಮಾಹಿತಿ ಕಲೆಹಾಕಿದಾಗ ನಕಲಿ ಹೆಸರಿನಲ್ಲಿ ಬಂದಿರುವ ಕರೆಯೆಂದು ಮನವರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಿ, ಕರೆ ಮಾಡಿದವರು ಯಾರು, ಯಾಕಾಗಿ ಕರೆ ಮಾಡಿದ್ದಾರೆಂದು ಪತ್ತೆ ಮಾಡಬೇಕು ಎಂದು ಯುಟಿ ಖಾದರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ನಕಲಿ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಎಂದು ಹೇಳಿ ಕರೆ ಮಾಡಿ, ಶಾಸಕರನ್ನು ಯಾಮಾರಿಸಲು ಯತ್ನಿಸುವ ಕೃತ್ಯ ಎನ್ನಲಾಗುತ್ತಿದೆ. ಲೋನ್ ಕೊಡುತ್ತೇವೆ, ಆಧಾರ್ ಲಿಂಕ್ ಆಗಿಲ್ಲವೆಂದು ಸೈಬರ್ ವಂಚಕರು ಫೋನ್ ಮಾಡುವ ರೀತಿ, ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿರುವ ಸಾಧ್ಯತೆಯಿದೆ.
Mangalore Man tries to dupe MLA UT Khader as Rahul Gandhi PA, files a complaint to Mangalore Police commissioner Shashi Kumar.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm