ಬ್ರೇಕಿಂಗ್ ನ್ಯೂಸ್
02-01-23 05:34 pm Mangalore Correspondent ಕರಾವಳಿ
ಮಂಗಳೂರು, ಜ.2: ವಿಧಾನಸಭೆ ವಿಪಕ್ಷ ಉಪನಾಯಕ ಯುಟಿ ಖಾದರ್ ಅವರಿಗೆ ಯಾರೋ ಅಪರಿಚಿತರು ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಫೋನ್ ಮಾಡಿ ಯಾಮಾರಿಸಲು ಯತ್ನಿಸಿದ್ದಾನೆ. ಈ ಬಗ್ಗೆ ತಿಳಿಯುತ್ತಲೇ ಯುಟಿ ಖಾದರ್ ಮಂಗಳೂರು ಪೊಲೀಸ್ ಕಮಿಷನರ್ ಗೆ ದೂರು ನೀಡಿದ್ದು, ನಕಲಿ ವ್ಯಕ್ತಿಯ ಬಗ್ಗೆ ತನಿಖೆ ನಡೆಸಲು ಕೋರಿದ್ದಾರೆ. ಪೊಲೀಸರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇಂದು ಮಧ್ಯಾಹ್ನ ಯುಟಿ ಖಾದರ್ ಅವರ ಮೊಬೈಲ್ ಸಂಖ್ಯೆಗೆ 8146006626 ನಂಬರಿನಿಂದ ಕರೆ ಬಂದಿತ್ತು. ಎರಡು ಬಾರಿ ಫೋನ್ ಕರೆ ಬಂದಿದ್ದರಿಂದ ಸಭೆಯಲ್ಲಿ ಭಾಗವಹಿಸಿದ್ದರಿಂದ ಕರೆ ಸ್ವೀಕರಿಸಲು ಆಗಿರಲಿಲ್ಲ. ಸಭೆ ಮುಗಿಸಿ ಮೊಬೈಲ್ ನೋಡಿದಾಗ, ಅದೇ ನಂಬರಿನಿಂದ ಸಂದೇಶ ಬಂದಿತ್ತು. Good afternoon this side kaniskha singh pa to shri rahul Gandhi ji call me ಎಂದು ಸಂದೇಶ ಬರೆಯಲಾಗಿತ್ತು. ಆ ಮೊಬೈಲ್ ಸಂಖ್ಯೆಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೆಸರಲ್ಲಿ ಸೇವ್ ಮಾಡಿರುವುದು ಟ್ರೂ ಕಾಲರ್ ಮೂಲಕ ತಿಳಿದುಬಂದಿದೆ.
ಈ ಕುರಿತು ಮಾಹಿತಿ ಕಲೆಹಾಕಿದಾಗ ನಕಲಿ ಹೆಸರಿನಲ್ಲಿ ಬಂದಿರುವ ಕರೆಯೆಂದು ಮನವರಿಕೆಯಾಗಿದೆ. ಈ ಕುರಿತು ತನಿಖೆ ನಡೆಸಿ, ಕರೆ ಮಾಡಿದವರು ಯಾರು, ಯಾಕಾಗಿ ಕರೆ ಮಾಡಿದ್ದಾರೆಂದು ಪತ್ತೆ ಮಾಡಬೇಕು ಎಂದು ಯುಟಿ ಖಾದರ್, ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ. ಮೇಲ್ನೋಟಕ್ಕೆ ನಕಲಿ ಹೆಸರಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಕಡೆಯಿಂದ ಎಂದು ಹೇಳಿ ಕರೆ ಮಾಡಿ, ಶಾಸಕರನ್ನು ಯಾಮಾರಿಸಲು ಯತ್ನಿಸುವ ಕೃತ್ಯ ಎನ್ನಲಾಗುತ್ತಿದೆ. ಲೋನ್ ಕೊಡುತ್ತೇವೆ, ಆಧಾರ್ ಲಿಂಕ್ ಆಗಿಲ್ಲವೆಂದು ಸೈಬರ್ ವಂಚಕರು ಫೋನ್ ಮಾಡುವ ರೀತಿ, ರಾಹುಲ್ ಗಾಂಧಿಯ ಪಿಎ ಎಂದು ಹೇಳಿಕೊಂಡು ಕಾಂಗ್ರೆಸ್ ಶಾಸಕರಿಗೆ ಕರೆ ಮಾಡಿರುವ ಸಾಧ್ಯತೆಯಿದೆ.
Mangalore Man tries to dupe MLA UT Khader as Rahul Gandhi PA, files a complaint to Mangalore Police commissioner Shashi Kumar.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm