ಬ್ರೇಕಿಂಗ್ ನ್ಯೂಸ್
02-01-23 09:02 pm Mangalore Correspondent ಕರಾವಳಿ
ಮಂಗಳೂರು, ಜ.2 : ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಸುರತ್ಕಲ್ ಗೋವಿಂದ ದಾಸ ಕಾಲೇಜಿನ ಮುಂಭಾಗದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.
"ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್" ಯೋಜನೆಯಡಿ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ ನೀರು, ಸಿಸಿ ಕೆಮರಾ ವ್ಯವಸ್ಥೆ ಸೇರಿದಂತೆ, ಮಹಿಳೆಯರು ಮತ್ತು ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ತುರ್ತು ಸಂದರ್ಭದಲ್ಲಿ ನೇರವಾಗಿ ಸ್ಥಳೀಯ ಪೊಲೀಸ್ ಅಧಿಕಾರಿಗಳ ಮೊಬೈಲ್ ಗೆ ಸಂಪರ್ಕ ಕಲ್ಪಿಸುವಂತೆ ಎಮರ್ಜನ್ಸಿ ಕರೆ ವ್ಯವಸ್ಥೆಯನ್ನೂ ಮಾಡಲಾಗಿದೆ" ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ ಹೇಳಿದರು.
"ಯೋಜನೆಯ ಮುಂದುವರಿದ ಭಾಗವಾಗಿ ಸುರತ್ಕಲ್ ಬೀಚ್ ನಲ್ಲಿ ಪ್ರವಾಸಿಗರ ವಿಹಾರಕ್ಕೆ ಪಾರ್ಕ್, ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ. ಜನರು ಇವುಗಳನ್ನು ಯೋಗ್ಯ ರೀತಿಯಲ್ಲಿ ಬಳಸುವ ಮೂಲಕ ಸ್ವಚ್ಛತೆಯ ಕಡೆಗೆ ಗಮನ ನೀಡುವಂತಾಗಬೇಕು" ಎಂದರು.
ಮಂಗಳೂರು ಮೇಯರ್ ಜಯಾನಂದ ಅಂಚನ್, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಎಸಿಪಿ ಎಸ್. ಮಹೇಶ್ ಕುಮಾರ್, ಸರ್ಕಲ್ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್, ಗೋವಿಂದ ದಾಸ್ ಕಾಲೇಜ್ ಪ್ರಾಂಶುಪಾಲ ಪ್ರೊ. ಕೃಷ್ಣಮೂರ್ತಿ, ಕಾರ್ಪೋರೇಟರ್ ವರುಣ್ ಚೌಟ, ಶ್ವೇತಾ ಪೂಜಾರಿ, ಶೋಭಾ ರಾಜೇಶ್, ಲೋಕೇಶ್ ಬೊಳ್ಳಾಜೆ, ನಯನ ಆರ್. ಕೋಟ್ಯಾನ್, ಸಂಗೀತಾ ನಾಯಕ್, ಸರಿತಾ ಶಶಿಧರ್, ಮಂಗಳೂರು ಉತ್ತರ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ಪುಷ್ಪರಾಜ್ ಸಸಿಹಿತ್ಲು ಮತ್ತಿತರರು ಉಪಸ್ಥಿತರಿದ್ದರು.
ಬಸ್ ನಿಲ್ದಾಣದಲ್ಲಿ ಏನಿದೆ ವಿಶೇಷ ?
ಹೈಟೆಕ್ ಬಸ್ ನಿಲ್ದಾಣದಲ್ಲಿ ಉಚಿತ ವೈಫೈ, ಮೂರು ಸಿಸಿ ಕೆಮರಾ, ಶುದ್ಧೀಕರಿಸಿದ ನೀರು, ಎಫ್ ಎಂ ರೇಡಿಯೋ, ಇನ್ವರ್ಟರ್ ವ್ಯವಸ್ಥೆ, ಎಸ್ ಓ ಎಸ್ ಬಟನ್, ಸಿಟಿ ಎಕ್ಸ್ ಸೂಪರ್ ಆಪ್, 2 ಫ್ಯಾನ್, ಪ್ರಥಮ ಚಿಕಿತ್ಸೆ ಪೆಟ್ಟಿಗೆ, 12 ಆಸನ ವ್ಯವಸ್ಥೆ , ಅಗ್ನಿಶಮನ ವ್ಯವಸ್ಥೆ, ಎಲ್ ಇ ಡಿ ಬೆಳಕಿನ ವ್ಯವಸ್ಥೆ, ಸೆಲ್ಫಿ ಪಾಯಿಂಟ್, ಮೊಬೈಲ್, ಲ್ಯಾಪ್ ಟಾಪ್ ಚಾರ್ಜಿಂಗ್ ಪಾಯಿಂಟ್
ಯೂಸ್ ಮಿ ಬಾಕ್ಸ್ ಇತ್ಯಾದಿ ಹೊಂದಿದ್ದು ನಿಲ್ದಾಣಕ್ಕೆ ಬರುವ ಜನರಿಗೆ ಉಚಿತ ಸೇವೆ ನೀಡಲಿದೆ.
Mangalore City North MLA Dr Y Bharath Shetty inaugurated a hi-tech bus stand in front of Govinda Das College in Surathkal. The bus stand has drinking water facility, CC camera and for the safety of women and girl children, there is an emergency call facility to reach out to the phone numbers of police officers seeking help.
26-06-25 02:15 pm
HK News Desk
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
26-06-25 12:02 pm
Mangalore Correspondent
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
26-06-25 02:54 pm
HK News Desk
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm