ಬ್ರೇಕಿಂಗ್ ನ್ಯೂಸ್
03-01-23 02:15 pm Mangalore Correspondent ಕರಾವಳಿ
ಮಂಗಳೂರು, ಜ.3: ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಆರನೇ ಕ್ಲಾಸ್ ವಿದ್ಯಾರ್ಥಿಗೆ ಪೊಲೀಸರು ಲಾಠಿಯೇಟು ಕೊಟ್ಟು ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಪಣಂಬೂರು ಠಾಣೆಯ ಸುನಿಲ್ ಎಂಬ ಪೇದೆಯನ್ನು ಸಸ್ಪೆಂಡ್ ಮಾಡಿದ್ದಾರೆ.
ಭಾನುವಾರ ಸಂಜೆ ತಣ್ಣೀರುಬಾವಿಯಲ್ಲಿ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಇದ್ದುದರಿಂದ ರಸ್ತೆ ಪೂರ್ತಿ ಬ್ಲಾಕ್ ಆಗಿತ್ತು. ಕರ್ತವ್ಯದಲ್ಲಿದ್ದ ಪಣಂಬೂರು ಪೊಲೀಸರು ರಸ್ತೆಯ ಟ್ರಾಫಿಕ್ ಕ್ಲಿಯರ್ ಮಾಡುವುದರಲ್ಲಿ ನಿರತರಾಗಿದ್ದರು. ಈ ವೇಳೆ, ಕ್ರಿಕೆಟ್ ಆಡಿ ಬೈಕಿನಲ್ಲಿ ಮರಳುತ್ತಿದ್ದ ಹುಡುಗರ ಮೇಲೆ ಪೊಲೀಸರು ದರ್ಪ ತೋರಿದ್ದಾರೆ.

ಐದಾರು ಮಂದಿ ಯುವಕರ ಮೇಲೆ ಲಾಠಿ ಚಾರ್ಜ್ ಮಾಡಿದ್ದರು. ಈ ಪೈಕಿ ಆರನೇ ಕ್ಲಾಸ್ ವಿದ್ಯಾರ್ಥಿ ಮತ್ತು ಪಿಯುಸಿ ವಿದ್ಯಾರ್ಥಿಯೂ ಸೇರಿದ್ದರು. ಸಣ್ಣ ಹುಡುಗನಿಗೆ ಲಾಠಿಯಿಂದ ಕೈ, ಬೆನ್ನು, ಕಾಲಿಗೆ ಪೆಟ್ಟು ಬಿದ್ದಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಹುಡುಗನನ್ನು ಸ್ಥಳೀಯರು ಎತ್ತಿಕೊಂಡು ಆಸ್ಪತ್ರೆಗೆ ಸಾಗಿಸಿದ್ದರು. ಇದೇ ವೇಳೆ, ಸ್ಥಳದಲ್ಲಿ ಜಮಾಯಿಸಿದ್ದ ಯುವಕರು ಪೊಲೀಸರನ್ನು ತರಾಟೆಗೆತ್ತಿಕೊಂಡು ದಬಾಯಿಸಿದ್ದಾರೆ. ನೀವು ಲಾಠಿ ಚಾರ್ಜ್ ಮಾಡಿದ್ದು ಯಾಕೆ, ನೀವು ಭಾರೀ ಲಾಠಿ ಬೀಸುತ್ತೀರಾ ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು.

ಘಟನೆ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗಮನಕ್ಕೆ ತಂದು ಪೊಲೀಸ್ ಕಮಿಷನರಿಗೆ ದೂರು ನೀಡುವಂತೆ ಮಾಡಿದ್ದರು. ಶಾಸಕರ ಸೂಚನೆಯಂತೆ, ಇಲಾಖಾ ತನಿಖೆ ನಡೆದು ಲಾಠಿ ಬೀಸಿದ್ದ ಪೇದೆ ಸುನೀಲ್ ಎಂಬವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ. ಪಣಂಬೂರು ಎಸ್ಐ ಸ್ಥಳದಲ್ಲಿ ಇದ್ದಾಗಲೇ ಲಾಠಿಯಲ್ಲಿ ದೌರ್ಜನ್ಯ ಎಸಗಲಾಗಿತ್ತು. ಎಸ್ಐ ಬಂದು ಯಾಕೆ ಲಾಠಿ ಚಾರ್ಜ್ ಮಾಡಿದ್ದು ಎಂದು ಪೊಲೀಸರನ್ನು ಪ್ರಶ್ನೆ ಮಾಡಿದ್ದರು. ಬಳಿಕ ಎಸ್ಐ ಸೇರಿ ಹಿರಿಯಧಿಕಾರಿಗಳು ಬಂದು ಸ್ಥಳೀಯರನ್ನು ಸಮಾಧಾನಪಡಿಸುವ ಕೆಲಸ ಮಾಡಿದ್ದರು.
Mangalore Police atrocity at Tannirbhavi beach, Constable Sunil Suspended. The police here allegedly lathi-charged youths at Tannirbhavi beach to clear the traffic block. A class 6 student and PU students also reportedly received blows during the atrocity from the police. Locals took the cops to task. A class 6 student was injured seriously and admitted to the hospital. Local public gheraoed the police and took three cops on spot to task.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm