ಬ್ರೇಕಿಂಗ್ ನ್ಯೂಸ್
04-01-23 08:20 pm Mangalore Correspondent ಕರಾವಳಿ
ಉಳ್ಳಾಲ, ಜ.4 : ಹರೇಕಳದ ಡ್ಯಾಂ ಕಮ್ ಸೇತುವೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮಂಜೂರಾಗಿದ್ದು, ರಸ್ತೆ ಬದಿಯಲ್ಲಿ ಸಮರ್ಪಕ ಮೋರಿ ರಚಿಸೋಕು ಆಗದ ಬಿಜೆಪಿ ಆಡಳಿತವು ಸೇತುವೆ ಮಾಡುವುದು ಕನಸು ಎಂದು ಶಾಸಕ ಯು.ಟಿ ಖಾದರ್ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಹರೇಕಳದ ನೂತನ ಸೇತುವೆ ಬಿಜೆಪಿ ಸರಕಾರದ್ದೆಂದು ಫ್ಲೆಕ್ಸ್ ಹಾಕಿ ಪ್ರಚಾರ ಪಡೆಯುತ್ತಿದ್ದಾರೆ. ಯಾವ ಸರಕಾರ ಹರೇಕಳದ ಸೇತುವೆ ಕಟ್ಟಿದೆ ಎಂಬುದು ಮಾಧ್ಯಮಗಳ ಸುದ್ದಿ ದಾಖಲಾತಿ ಇದೆ. ಸೇತುವೆ ನಿರ್ಮಾಣದ ನಂತರ ತಾಂತ್ರಿಕ ಅಡೆತಡೆಯಿಂದ ಆದ ಕೆಲವೊಂದು ಅನಾಹುತಕ್ಕೆ ಹದಿನೈದು ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು ಬಿಜೆಪಿ ಸರಕಾರ ಹೌದು. ಇನ್ನುಳಿದಂತೆ ಸೇತುವೆ ಮಂಜೂರು ಮಾಡಿದ್ದೇ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದ ದಿನಗಳಲ್ಲಿ ಎಂಬುದನ್ನ ದಾಖಲೆಗಳಿಂದ ಅರಿತುಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ಶಾಸಕ ಖಾದರ್ ಟಾಂಗ್ ನೀಡಿದ್ದಾರೆ.



ಹರೇಕಳದಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹರೇಕಳ ಗ್ರಾಮಕ್ಕೆ ನಾಳೆ ಭೇಟಿ ನೀಡಲಿದ್ದು, ಗ್ರಾಮ ಪಂಚಾಯತ್ ಕಚೇರಿ ಕಟ್ಟಡ "ಹರೇಕಳ ಗ್ರಾಮ ಸೌಧ", ಗುತ್ತಿಗೆದಾರ ಡಾ.ಜಿ. ಶಂಕರ್ ಗ್ರಾಮಕ್ಕೆ ಕೊಡುಗೆಯ ರೂಪದಲ್ಲಿ ನಿರ್ಮಿಸಿದ ಆಸ್ಪತ್ರೆ, ಹರೇಕಳ - ಅಡ್ಯಾರ್ ಸಂಪರ್ಕ ಸೇತುವೆ ಹಾಗೂ ಡ್ಯಾಂ ವೀಕ್ಷಣೆ ಮಾಡಲಿದ್ದು ಬಳಿಕ ಹರೇಕಳ ಕಡವಿನ ಬಳಿ ನಡೆಯುವ ಸಾರ್ವಜನಿಕ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಹೇಳಿದರು.



ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ಆಡಳಿತದಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ಕೇಂದ್ರದಲ್ಲಿರುವ ನಮ್ಮ ರಾಜ್ಯದ ಮಂತ್ರಿಗಳು, ಸಂಸದರು ಚಕಾರ ಎತ್ತಿಲ್ಲ. ಬೀಡಿ ಕಾರ್ಮಿಕರು, ರೈತರು, ಮೀನುಗಾರರು ಸೇರಿದಂತೆ ಜನಸಾಮ್ಯಾನರ ಬದುಕು ಹೈರಾಣಾಗುತ್ತಿರುವ ಕುರಿತು ಎಲ್ಲೂ ಮಾತನಾಡುತ್ತಿಲ್ಲ. ಸರಕಾರಿ ನೌಕರರಿಗೆ ವೇತನ ನೀಡದೆ ಸಂಕಷ್ಟ ತಂದಿದ್ದಲ್ಲದೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಸಾಮಾನ್ಯ ಜನರ ಬದುಕು ಹೈರಾಣಾಗುತ್ತಿದೆ ಎಂದು ಖೇದ ವ್ಯಕ್ತಪಡಿಸಿದರು.
Mangalore No development works from BJP for Harekala dam, only diverting peoples minds slams U T Khader.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm