ಬ್ರೇಕಿಂಗ್ ನ್ಯೂಸ್
04-01-23 08:20 pm Mangalore Correspondent ಕರಾವಳಿ
ಉಳ್ಳಾಲ, ಜ.4 : ಹರೇಕಳದ ಡ್ಯಾಂ ಕಮ್ ಸೇತುವೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಮಂಜೂರಾಗಿದ್ದು, ರಸ್ತೆ ಬದಿಯಲ್ಲಿ ಸಮರ್ಪಕ ಮೋರಿ ರಚಿಸೋಕು ಆಗದ ಬಿಜೆಪಿ ಆಡಳಿತವು ಸೇತುವೆ ಮಾಡುವುದು ಕನಸು ಎಂದು ಶಾಸಕ ಯು.ಟಿ ಖಾದರ್ ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಹರೇಕಳದ ನೂತನ ಸೇತುವೆ ಬಿಜೆಪಿ ಸರಕಾರದ್ದೆಂದು ಫ್ಲೆಕ್ಸ್ ಹಾಕಿ ಪ್ರಚಾರ ಪಡೆಯುತ್ತಿದ್ದಾರೆ. ಯಾವ ಸರಕಾರ ಹರೇಕಳದ ಸೇತುವೆ ಕಟ್ಟಿದೆ ಎಂಬುದು ಮಾಧ್ಯಮಗಳ ಸುದ್ದಿ ದಾಖಲಾತಿ ಇದೆ. ಸೇತುವೆ ನಿರ್ಮಾಣದ ನಂತರ ತಾಂತ್ರಿಕ ಅಡೆತಡೆಯಿಂದ ಆದ ಕೆಲವೊಂದು ಅನಾಹುತಕ್ಕೆ ಹದಿನೈದು ಕೋಟಿ ರೂಪಾಯಿ ಬಿಡುಗಡೆ ಮಾಡಿರುವುದು ಬಿಜೆಪಿ ಸರಕಾರ ಹೌದು. ಇನ್ನುಳಿದಂತೆ ಸೇತುವೆ ಮಂಜೂರು ಮಾಡಿದ್ದೇ ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗಿದ್ದ ದಿನಗಳಲ್ಲಿ ಎಂಬುದನ್ನ ದಾಖಲೆಗಳಿಂದ ಅರಿತುಕೊಳ್ಳಿ ಎಂದು ಬಿಜೆಪಿ ನಾಯಕರಿಗೆ ಶಾಸಕ ಖಾದರ್ ಟಾಂಗ್ ನೀಡಿದ್ದಾರೆ.



ಹರೇಕಳದಲ್ಲಿ ನಡೆದ ಸುದ್ದಿಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹರೇಕಳ ಗ್ರಾಮಕ್ಕೆ ನಾಳೆ ಭೇಟಿ ನೀಡಲಿದ್ದು, ಗ್ರಾಮ ಪಂಚಾಯತ್ ಕಚೇರಿ ಕಟ್ಟಡ "ಹರೇಕಳ ಗ್ರಾಮ ಸೌಧ", ಗುತ್ತಿಗೆದಾರ ಡಾ.ಜಿ. ಶಂಕರ್ ಗ್ರಾಮಕ್ಕೆ ಕೊಡುಗೆಯ ರೂಪದಲ್ಲಿ ನಿರ್ಮಿಸಿದ ಆಸ್ಪತ್ರೆ, ಹರೇಕಳ - ಅಡ್ಯಾರ್ ಸಂಪರ್ಕ ಸೇತುವೆ ಹಾಗೂ ಡ್ಯಾಂ ವೀಕ್ಷಣೆ ಮಾಡಲಿದ್ದು ಬಳಿಕ ಹರೇಕಳ ಕಡವಿನ ಬಳಿ ನಡೆಯುವ ಸಾರ್ವಜನಿಕ ಬೃಹತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದವರು ಹೇಳಿದರು.



ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರಕಾರದ ಆಡಳಿತದಿಂದ ಜನತೆ ಭ್ರಮನಿರಸನಗೊಂಡಿದ್ದಾರೆ. ಕೇಂದ್ರದಲ್ಲಿರುವ ನಮ್ಮ ರಾಜ್ಯದ ಮಂತ್ರಿಗಳು, ಸಂಸದರು ಚಕಾರ ಎತ್ತಿಲ್ಲ. ಬೀಡಿ ಕಾರ್ಮಿಕರು, ರೈತರು, ಮೀನುಗಾರರು ಸೇರಿದಂತೆ ಜನಸಾಮ್ಯಾನರ ಬದುಕು ಹೈರಾಣಾಗುತ್ತಿರುವ ಕುರಿತು ಎಲ್ಲೂ ಮಾತನಾಡುತ್ತಿಲ್ಲ. ಸರಕಾರಿ ನೌಕರರಿಗೆ ವೇತನ ನೀಡದೆ ಸಂಕಷ್ಟ ತಂದಿದ್ದಲ್ಲದೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಸಾಮಾನ್ಯ ಜನರ ಬದುಕು ಹೈರಾಣಾಗುತ್ತಿದೆ ಎಂದು ಖೇದ ವ್ಯಕ್ತಪಡಿಸಿದರು.
Mangalore No development works from BJP for Harekala dam, only diverting peoples minds slams U T Khader.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm