ಬ್ರೇಕಿಂಗ್ ನ್ಯೂಸ್
04-01-23 10:05 pm Mangalore Correspondent ಕರಾವಳಿ
ಮಂಗಳೂರು, ಜ.4: ರಾಮ ಜನ್ಮಭೂಮಿ, ತ್ರಿಪಲ್ ತಲಾಖ್ ಮತ್ತಿತರ ದೇಶದ ಅತ್ಯಂತ ಪ್ರಮುಖ ವಿವಾದಗಳ ಬಗ್ಗೆ ತೀರ್ಪು ನೀಡಿದ್ದ ಮೂಡುಬಿದ್ರೆ ಮೂಲದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್ ಅಬ್ದುಲ್ ನಜೀರ್ ಜನವರಿ 4ರಂದು ನಿವೃತ್ತಿಯಾಗಿದ್ದಾರೆ.
ಅಯೋಧ್ಯಾ ರಾಮ ಜನ್ಮಭೂಮಿ ಬಗ್ಗೆ ತೀರ್ಪು ನೀಡಿದ್ದ ಐವರು ನ್ಯಾಯಾಧೀಶರಲ್ಲಿ ಎಸ್.ಎ. ನಜೀರ್ ಒಬ್ಬರೇ ಮುಸ್ಲಿಂ ನ್ಯಾಯಾಧೀಶರಾಗಿದ್ದರು. ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟಿನ ಐವರು ನ್ಯಾಯಾಧೀಶರಿದ್ದ ಸಾಂವಿಧಾನಿಕ ಪೀಠವು ಕೇಂದ್ರ ಸರಕಾರದ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪ್ರಕರಣದಲ್ಲಿಯೂ ತೀರ್ಪು ನೀಡಿದ್ದರು. ಆ ಪೀಠದಲ್ಲಿ ಎಸ್.ಎ ನಜೀರ್ ಹಿರಿಯ ನ್ಯಾಯಾಧೀಶರಾಗಿದ್ದು, ಅವರ ನೇತೃತ್ವದಲ್ಲಿಯೇ ಪೀಠ ರಚನೆಯಾಗಿತ್ತು.

1956 ಜನವರಿ 5ರಂದು ಮೂಡುಬಿದ್ರೆಯಲ್ಲಿ ಜನಿಸಿದ್ದ ನಜೀರ್ ಅವರು ಬೆಳುವಾಯಿಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ, ಮೂಡುಬಿದ್ರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಗಳಿಸಿದ್ದರು. ಆನಂತರ, ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಗಳಿಸಿದ್ದರು. 1983ರಲ್ಲಿ ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾಗಿ ವೃತ್ತಿ ಆರಂಭಿಸಿದ್ದ ನಜೀರ್ ಅವರು ನ್ಯಾಯಾಧೀಶರ ಪರೀಕ್ಷೆ ಬರೆದು 2003ರಲ್ಲಿ ಹೈಕೋರ್ಟ್ ನ್ಯಾಯಾಧೀಶ ಹುದ್ದೆಗೇರಿದ್ದರು. 2017ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಭಡ್ತಿ ಪಡೆದಿದ್ದರು.
ತುಳು, ಕನ್ನಡ, ಬ್ಯಾರಿ ಭಾಷೆಯನ್ನೂ ತಿಳಿದಿರುವ ನಜೀರ್ ಅವರು, ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದಿಂದ ಈ ಹುದ್ದೆಗೇರಿದ ಏಕೈಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದರು. ಇಂಗ್ಲಿಷ್ ಅಲ್ಲದೆ, ಸ್ಥಳೀಯ ಭಾಷೆಗಳಲ್ಲಿಯೂ ಭಾಷಣ ಮಾಡುತ್ತಿದ್ದುದು ಅವರ ಹೆಗ್ಗಳಿಕೆ. ಇತ್ತೀಚೆಗಷ್ಟೇ ಮೂಡುಬಿದ್ರೆಯ ವಕೀಲರ ಭವನದ ಉದ್ಘಾಟನೆಗೂ ಆಗಮಿಸಿದ್ದರು. ಆನಂತರ, ತಮ್ಮ ಸೇವೆಯ ಕೊನೆಯ ದಿನಗಳಿಗಾಗಿ ವೃತ್ತಿಗೆ ಮರಳಿದ್ದ ನಜೀರ್ ಅತ್ಯಂತ ಮಹತ್ವದ ನೋಟು ಅಮಾನ್ಯ ಪ್ರಕರಣದಲ್ಲಿ ತೀರ್ಪು ನೀಡಿ ಈಗ ನಿವೃತ್ತಿಯಾಗಿದ್ದಾರೆ.
Supreme Court judge, Justice S Abdul Nazeer, hailing from Moodbidri who was one among those who gave historic verdicts on Ayodhya Ram Janmabhoomi Babri Masjid, triple talaq and demonetisation issues, retired on Wednesday, January 4. He was the only Muslim among the five-judge bench who announced the Ayodhya verdict.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am