ಬ್ರೇಕಿಂಗ್ ನ್ಯೂಸ್
04-01-23 10:05 pm Mangalore Correspondent ಕರಾವಳಿ
ಮಂಗಳೂರು, ಜ.4: ರಾಮ ಜನ್ಮಭೂಮಿ, ತ್ರಿಪಲ್ ತಲಾಖ್ ಮತ್ತಿತರ ದೇಶದ ಅತ್ಯಂತ ಪ್ರಮುಖ ವಿವಾದಗಳ ಬಗ್ಗೆ ತೀರ್ಪು ನೀಡಿದ್ದ ಮೂಡುಬಿದ್ರೆ ಮೂಲದ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಎಸ್ ಅಬ್ದುಲ್ ನಜೀರ್ ಜನವರಿ 4ರಂದು ನಿವೃತ್ತಿಯಾಗಿದ್ದಾರೆ.
ಅಯೋಧ್ಯಾ ರಾಮ ಜನ್ಮಭೂಮಿ ಬಗ್ಗೆ ತೀರ್ಪು ನೀಡಿದ್ದ ಐವರು ನ್ಯಾಯಾಧೀಶರಲ್ಲಿ ಎಸ್.ಎ. ನಜೀರ್ ಒಬ್ಬರೇ ಮುಸ್ಲಿಂ ನ್ಯಾಯಾಧೀಶರಾಗಿದ್ದರು. ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟಿನ ಐವರು ನ್ಯಾಯಾಧೀಶರಿದ್ದ ಸಾಂವಿಧಾನಿಕ ಪೀಠವು ಕೇಂದ್ರ ಸರಕಾರದ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಪ್ರಕರಣದಲ್ಲಿಯೂ ತೀರ್ಪು ನೀಡಿದ್ದರು. ಆ ಪೀಠದಲ್ಲಿ ಎಸ್.ಎ ನಜೀರ್ ಹಿರಿಯ ನ್ಯಾಯಾಧೀಶರಾಗಿದ್ದು, ಅವರ ನೇತೃತ್ವದಲ್ಲಿಯೇ ಪೀಠ ರಚನೆಯಾಗಿತ್ತು.

1956 ಜನವರಿ 5ರಂದು ಮೂಡುಬಿದ್ರೆಯಲ್ಲಿ ಜನಿಸಿದ್ದ ನಜೀರ್ ಅವರು ಬೆಳುವಾಯಿಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ, ಮೂಡುಬಿದ್ರೆಯ ಮಹಾವೀರ ಕಾಲೇಜಿನಲ್ಲಿ ಬಿಕಾಂ ಪದವಿ ಗಳಿಸಿದ್ದರು. ಆನಂತರ, ಮಂಗಳೂರಿನ ಎಸ್ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಗಳಿಸಿದ್ದರು. 1983ರಲ್ಲಿ ಬೆಂಗಳೂರಿನಲ್ಲಿ ಹೈಕೋರ್ಟ್ ವಕೀಲರಾಗಿ ವೃತ್ತಿ ಆರಂಭಿಸಿದ್ದ ನಜೀರ್ ಅವರು ನ್ಯಾಯಾಧೀಶರ ಪರೀಕ್ಷೆ ಬರೆದು 2003ರಲ್ಲಿ ಹೈಕೋರ್ಟ್ ನ್ಯಾಯಾಧೀಶ ಹುದ್ದೆಗೇರಿದ್ದರು. 2017ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಭಡ್ತಿ ಪಡೆದಿದ್ದರು.
ತುಳು, ಕನ್ನಡ, ಬ್ಯಾರಿ ಭಾಷೆಯನ್ನೂ ತಿಳಿದಿರುವ ನಜೀರ್ ಅವರು, ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲದಿಂದ ಈ ಹುದ್ದೆಗೇರಿದ ಏಕೈಕ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿದ್ದರು. ಇಂಗ್ಲಿಷ್ ಅಲ್ಲದೆ, ಸ್ಥಳೀಯ ಭಾಷೆಗಳಲ್ಲಿಯೂ ಭಾಷಣ ಮಾಡುತ್ತಿದ್ದುದು ಅವರ ಹೆಗ್ಗಳಿಕೆ. ಇತ್ತೀಚೆಗಷ್ಟೇ ಮೂಡುಬಿದ್ರೆಯ ವಕೀಲರ ಭವನದ ಉದ್ಘಾಟನೆಗೂ ಆಗಮಿಸಿದ್ದರು. ಆನಂತರ, ತಮ್ಮ ಸೇವೆಯ ಕೊನೆಯ ದಿನಗಳಿಗಾಗಿ ವೃತ್ತಿಗೆ ಮರಳಿದ್ದ ನಜೀರ್ ಅತ್ಯಂತ ಮಹತ್ವದ ನೋಟು ಅಮಾನ್ಯ ಪ್ರಕರಣದಲ್ಲಿ ತೀರ್ಪು ನೀಡಿ ಈಗ ನಿವೃತ್ತಿಯಾಗಿದ್ದಾರೆ.
Supreme Court judge, Justice S Abdul Nazeer, hailing from Moodbidri who was one among those who gave historic verdicts on Ayodhya Ram Janmabhoomi Babri Masjid, triple talaq and demonetisation issues, retired on Wednesday, January 4. He was the only Muslim among the five-judge bench who announced the Ayodhya verdict.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm