ಬ್ರೇಕಿಂಗ್ ನ್ಯೂಸ್
05-01-23 01:43 pm Mangalore Correspondent ಕರಾವಳಿ
ಮಂಗಳೂರು, ಜ.5 : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ.
ಶಿವಮೊಗ್ಗ ಬಾಂಬ್ ಟ್ರಯಲ್ ಪ್ರಕರಣದಲ್ಲಿ ಬಂಧಿತನಾಗಿರುವ ಶಂಕಿತ ಉಗ್ರ ಮಾಝ್ ಮುನೀರ್ ಪಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ ಪಡೆದಿದ್ದ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಆತನ ದಾಖಲೆ ಇನ್ನಿತರ ಮಾಹಿತಿಗಳನ್ನು ಅಧಿಕಾರಿಗಳು ಸಂಗ್ರಹಿಸುತ್ತಿದ್ದಾರೆ.
ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಬಂಧನದಲ್ಲಿರುವ ಶಂಕಿತ ಉಗ್ರ ಶಾರೀಕ್ ನನ್ನೂ ಬೆಂಗಳೂರಿನಲ್ಲಿ ವಿಚಾರಣೆ ನಡೆಸಿರುವ ಅಧಿಕಾರಿಗಳು ಇದೀಗ ಮಂಗಳೂರಿನ ಪಿಎ ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ 7 ಮಂದಿ ಎನ್ಐಎ ಅಧಿಕಾರಿಗಳು ಆಗಮಿಸಿದ್ದಾರೆ ಎನ್ನುವ ಮಾಹಿತಿಗಳಿವೆ.
ಮಂಗಳೂರಿನ ಕುಕ್ಕರ್ ಬಾಂಬ್ ಪ್ರಕರಣದ ಎರಡು ತಿಂಗಳ ಮೊದಲೇ ಶಿವಮೊಗ್ಗದಲ್ಲಿ ಬಾಂಬ್ ಟ್ರಯಲ್ ನಡೆಸಿರುವುದು ಪತ್ತೆಯಾಗಿತ್ತು. ಪ್ರಕರಣದಲ್ಲಿ ಗೋಡೆ ಬರಹ ಪ್ರಕರಣದ ಆರೋಪಿಯಾಗಿದ್ದ ಮಾಝ್ ಮುನೀರ್ ಮತ್ತು ಯಾಸಿನ್ ಎಂಬುವರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಮೊಹಮ್ಮದ್ ಶಾರೀಕ್ ತಲೆಮರೆಸಿಕೊಂಡು ಬಳಿಕ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಕೇಸ್ ನಲ್ಲಿ ಸಿಕ್ಕಿಬಿದ್ದಿದ್ದ.
ಎನ್ಐಎ ಅಧಿಕಾರಿಗಳು ಈಗ ಶಿವಮೊಗ್ಗ ಮತ್ತು ಮಂಗಳೂರು ಬ್ಲಾಸ್ಟ್ ಪ್ರಕರಣದ ಬಗ್ಗೆ ಏಕಕಾಲದಲ್ಲಿ ತನಿಖೆ ನಡೆಸುತ್ತಿದ್ದಾರೆ.
Trail blast in Shivamogga, NIA raids P A College of Engineering in Mangalore for details as accused Maz Muneer Ahmed studied at the same college. The NIA has raided the college to collect details of the same.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
15-11-25 10:47 pm
Mangalore Correspondent
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
ಬಿ.ಸಿ. ರೋಡ್ ಬಳಿ ಭೀಕರ ಅಪಘಾತ ; ಉಡುಪಿ ಕೃಷ್ಣ ಮಠಕ್...
15-11-25 12:12 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm