ಬ್ರೇಕಿಂಗ್ ನ್ಯೂಸ್
05-01-23 09:56 pm Mangalore Correspondent ಕರಾವಳಿ
ಉಳ್ಳಾಲ, ಜ.5 : ಪೌರಾಣಿಕ ಹಿನ್ನೆಲೆಯುಳ್ಳ ಕಲ್ಲಾಪಿನ ಬುರ್ದುಗೋಳಿಯಲ್ಲಿರುವ ಶ್ರೀ ಗುಳಿಗ-ಕೊರಗಜ್ಜನ ಉದ್ಭವ ಶಿಲೆಯ ಆದಿಸ್ಥಳಕ್ಕೆ ಜ.6ರಂದು ಬಂಗಾರದ ಮುಟ್ಟಾಲೆ ಸಮರ್ಪಣೆ ನಡೆದು ಮರುದಿನ ಶನಿವಾರ ವರ್ಷಾವಧಿ ಕೋಲ ನಡೆಯಲಿದೆ.
ನಾಳೆ, ಜನವರಿ 6ರಂದು ಸಂಜೆ 3 ಗಂಟೆಗೆ ಸೋಮೇಶ್ವರ ಶ್ರೀ ಸೋಮನಾಥನ ದಿವ್ಯ ಸನ್ನಿಧಿಯಿಂದ ಬಂಗಾರದ ಮುಟ್ಟಾಲೆಯ ಭವ್ಯ ಶೋಭಾಯಾತ್ರೆ ವಾಹನ ಮೂಲಕ ಹೊರಟು ಕಲ್ಲಾಪು, ಕೆರೆಬೈಲು ಬಳಿಯ ನಾಗದೇವರ ಕಟ್ಟೆಯಿಂದ ಪೂರ್ಣಕುಂಭ ಕಲಶ, ವಾದ್ಯ, ಚೆಂಡೆಗಳ ಘೋಷದೊಂದಿಗೆ ಕಾಲ್ನಡಿಗೆಯಲ್ಲಿ ಸಾಗಿ ಬುರ್ದುಗೋಳಿಯ ಕಾಯಂಗಳ ಬಳಿ ನೂತನವಾಗಿ ನಿರ್ಮಿಸಿರುವ ಭಂಡಾರಮನೆಗೆ ಸಮರ್ಪಣೆಯಾಗಲಿದೆ ಎಂದು ಶ್ರೀ ಕ್ಷೇತ್ರದ ಭಂಡಾರ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಹಾಸ ಪಂಡಿತೌಸ್ ಕ್ಷೇತ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಸಂಜೆ 6 ಗಂಟೆಗೆ ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, 7 ಗಂಟೆಗೆ ಧಾರ್ಮಿಕ ಸಭಾ ಕಾರ್ಯಕ್ರಮ, ರಾತ್ರಿ 8.30 ಕ್ಕೆ ಕಟೀಲ್ದಪ್ಪೆ ಉಳ್ಳಾಲ್ತಿ ನಾಟಕ ಪ್ರದರ್ಶನ, ರಾತ್ರಿ 7.30ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಜನವರಿ 7ರಂದು ರಾತ್ರಿ 7 ಗಂಟೆಗೆ ಕ್ಷೇತ್ರದಲ್ಲಿ ದೈವಗಳಿಗೆ ವರ್ಷಾವಧಿ ಕೋಲ ಸೇವೆ ನಡೆಯಲಿದೆ. ಎರಡು ದಿನಗಳ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಲು ವಿವಿಧ ಸಮಿತಿಗಳು, ಮಹಿಳಾ ವಿಭಾಗ ಮತ್ತು ಊರಿನ ಸಂಘ-ಸಂಸ್ಥೆಗಳು ಅವಿರತವಾಗಿ ಸೇವೆಗೈಯುತ್ತಿದೆ ಎಂದರು.
ಇತ್ತೀಚೆಗೆ ಪ್ರಶ್ನಾಚಿಂತನೆ ನಡೆದ ಬಳಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ಕೋಲ ಸೇವೆಗೆ ಬೇಕಾಗಿರುವ ಪರಿಕರಗಳು ಇಲ್ಲದ ಕಾರಣ ಕುತ್ತಾರಿನ ಏಳು ಜಾಗದಲ್ಲಿ ಕೋಲ ನಡೆಯುವ ಕ್ಷೇತ್ರದಿಂದ ತರಲಾಗುತ್ತಿತ್ತು. ಪ್ರಸ್ತುತ ಭಕ್ತರ ಅನುಕೂಲಕ್ಕಾಗಿ ಬುರ್ದುಗೋಳಿಯಲ್ಲಿ ಭಂಡಾರ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು ಜೀರ್ಣೋದ್ಧಾರ ಕಾರ್ಯ ವೇಗವಾಗಿ ಪೂರ್ಣಗೊಂಡಿದೆ. ನಾಳೆ ಭಂಡಾರ ವ್ಯವಸ್ಥಾಪನ ಸಮಿತಿ ಮೂಲಕ ಕೊರಗಜ್ಜನಿಗೆ ಬಂಗಾರದ ಮುಟ್ಟಾಲೆ ಸಮರ್ಪಣೆಯಾಗಲಿದೆ.
ಪತ್ರಿಕಾಗೋಷ್ಠಿಯಲ್ಲಿ ಜೀವನ್ ಕುಮಾರ್ ತೊಕ್ಕೊಟ್ಟು, ವಿಶ್ವನಾಥ ನಾಯಕ್, ದೇವದಾಸ್ ಗಟ್ಟಿ ಕಾಯಂಗಳ, ಪ್ರಶಾಂತ್ ಕಾಯಂಗಳ, ಕಮಲಾಕ್ಷ ಕುಲಾಲ್, ರವಿಶಂಕರ್ ಸೋಮೇಶ್ವರ, ಪುರುಷೋತ್ತಮ ಕಲ್ಲಾಪು ಹಾಗೂ ನವೀನ್ ಕಾಯಂಗಳ ಇದ್ದರು.
The golden muttale will be offered to the adisthalam of Sri Guliga-Koragajjana's udbhava shila at Burdugoli in Kallapina, which has a mythological background, on January 6 and the year-long kola will be held on Saturday the next day.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm