ಬ್ರೇಕಿಂಗ್ ನ್ಯೂಸ್
05-01-23 11:07 pm Mangalore Correspondent ಕರಾವಳಿ
ಉಳ್ಳಾಲ, ಜ.5 : ಕರಾವಳಿ ಕೋಮುವಾದದ ಲ್ಯಾಬೊರೇಟರಿ ಆಗಿದ್ದು ,ಇಲ್ಲಿ ಯಕ್ಷಗಾನ ಕಲೆಯಲ್ಲೂ ಹಿಂದುತ್ವ ತೂರ್ತಾರೆ. ಬಿಜೆಪಿ, ಆರ್ ಎಸ್ ಎಸ್ ಗೆ ಅದುವೇ ಬಂಡವಾಳವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವಿಧಾನಸಭೆ ಪ್ರತಿ ಪಕ್ಷ ನಾಯಕರಾದ ಸಿದ್ಧರಾಮಯ್ಯ ಹೇಳಿದರು.
ಮಂಗಳೂರು ಹೊರವಲಯದ ಹರೇಕಳ ಗ್ರಾಮದ ಕಡವಿನ ಬಳಿಯಲ್ಲಿ ಇಂದು ಉಳ್ಳಾಲ ಮತ್ತು ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಬೃಹತ್ ಸಾರ್ವಜನಿಕ ಜನಜಾಗೃತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.


ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಓರ್ವ ವಿಧೂಷಕನಂತೆ. ಆತ ಕರಾವಳಿಯ ಗಂಡು ಕಲೆ ಯಕ್ಷಗಾನದಲ್ಲೂ ಹಿಂದುತ್ವ ತೂರಲು ಪಿತೂರಿ ಮಾಡಿದ್ದು ಇಂಥವರು ದೇಶದ ಆಡಳಿತ ನಡೆಸಲು ಲಾಯಕ್ಕಾ ಎಂದು ಪ್ರಶ್ನಿಸಿದರು. ಕೋಮುವಾದ ಹುಟ್ಟೋದೇ ಕರಾವಳಿಯಿಂದ. ಯಾರಿಗೆ ಭಾರತದ ಸಂವಿಧಾನದ ಮೇಲೆ ವಿಶ್ವಾಸ ಇರಲ್ಲ ಅವರು ಜನಪ್ರತಿನಿಧಿಯಾಗಲು ಲಾಯಕ್ಕಲ್ಲ. ಅನಂತ ಕುಮಾರ್ ಹೆಗಡೆ ಸಂವಿಧಾನ ಬದಲಿಸ್ತೇವೆ ಎಂದು ಹೇಳಿದಾಗ ಮೋದಿ, ಅಮಿತ್ ಶಾ ಏನೂ ಕ್ರಮ ಕೈಗೊಂಡಿಲ್ಲ. ಮೋದಿ, ಅಮಿತ್ ಷಾ ಅವರೇ ಇವರ ಬಾಯಲ್ಲಿ ಹೇಳಿಸಿರೋದು ಅನ್ನೋದನ್ನಾ ನಾವು ಅರ್ಥ ಮಾಡಿಕೊಳ್ಳಬೇಕು ಎಂದರು. ಮುಖ್ಯಮಂತ್ರಿ ಅಂದ್ರೆ ಬರೀ ಆರ್ ಎಸ್ ಎಸ್ ನ ಮುಖ್ಯಂಮತ್ರಿ ಅಲ್ಲ, ರಾಜ್ಯದ ಏಳು ಕೋಟಿ ಜನರ ಮುಖ್ಯಮಂತ್ರಿ. ಆದರೆ ನಮ್ಮ ರಾಜ್ಯದ ಮುಖ್ಯ ಮಂತ್ರಿಗಳು ದ.ಕ. ಜಿಲ್ಲೆಯಲ್ಲಿ ಹಲವು ಮರ್ಡರ್ ಗಳಾದಾಗ ಆಯ್ದ ಧರ್ಮದವರ ಮನೆಗೆ ಹೋಗಿ ಮಾತ್ರ ಪರಿಹಾರ ಕೊಡ್ತಾರೆ ಎಂದು ದೂರಿದರು.


ಸಮಾವೇಶಕ್ಕೂ ಮೊದಲು ಸಿದ್ಧರಾಮಯ್ಯ ಅವರು ಹರೇಕಳದ ಗ್ರಾಮ ಪಂಚಾಯತ್ನ ನೂತನ ಕಚೇರಿ ಕಟ್ಟಡ "ಹರೇಕಳ ಗ್ರಾಮ ಸೌಧ" ಮತ್ತು ಡಾ.ಜಿ. ಶಂಕರ್ ಗ್ರಾಮಕ್ಕೆ ಕೊಡುಗೆಯ ರೂಪದಲ್ಲಿ ನಿರ್ಮಿಸಿದ ಆಸ್ಪತ್ರೆ, ಹರೇಕಳ -ಅಡ್ಯಾರ್ ಸಂಪರ್ಕ ಸೇತುವೆ ಹಾಗೂ ಡ್ಯಾಂನ ವೀಕ್ಷಣೆ ಮಾಡಿದರು. ಶಾಸಕ ಯು.ಟಿ ಖಾದರ್, ವಿದಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ,ಮಾಜಿ ಸಚಿವ ರಮಾನಾಥ ರೈ ಮೊದಲಾದವರು ವೇದಿಕೆಯಲ್ಲಿದ್ದರು.
BJP does not believe in the Constitution, Mangalore hub for communal fights says Siddaramaiah in Mangalore. Former Chief Minister and Leader of the Opposition in the Legislative Assembly Siddaramaiah said here on Thursday that the BJP does not believe in the Constitution and in providing equal rights and equal opportunities to people.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm