ಬ್ರೇಕಿಂಗ್ ನ್ಯೂಸ್
17-10-20 02:22 pm Mangalore Correspondent | Photo - Punik Shetty ಕರಾವಳಿ
ಮಂಗಳೂರು, ಅಕ್ಟೋಬರ್ 17: ಮಂಗಳೂರು ದಸರಾ ಎಂದೇ ಪ್ರಸಿದ್ಧಿ ಗಳಿಸಿರುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ದಸರಾ ಉತ್ಸವಕ್ಕೆ ಎನ್ಆರ್ ಐ ಫೋರಂ ಘಟಕದ ಮಾಜಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ ಚಾಲನೆ ನೀಡಿದರು.
ಕೊರೊನಾ ನಿರ್ಬಂಧಗಳ ನಡುವೆ, ಸಾಂಪ್ರದಾಯಿಕ ಉತ್ಸವಕ್ಕೆ ಅನುಮತಿ ನೀಡಬೇಕೆಂಬ ನೆಲೆಯಲ್ಲಿ ಜಿಲ್ಲಾಡಳಿತ ದಸರಾ ಉತ್ಸವಕ್ಕೆ ಅವಕಾಶ ನೀಡಿದೆ. ಅದರಂತೆ, ಕುದ್ರೋಳಿ ದೇವಸ್ಥಾನ ಆಡಳಿತ ಸಂಪ್ರದಾಯಕ್ಕೆ ಚ್ಯುತಿ ಬರದಂತೆ ಉತ್ಸವ ಆಚರಿಸಲು ವ್ಯವಸ್ಥೆ ಮಾಡಿಕೊಂಡಿದೆ. ನವರಾತ್ರಿ ಮೊದಲ ದಿವಸವಾದ ಇಂದು ಶಾರದೆ ಹಾಗೂ ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠೆ ಮಾಡಲಾಗಿದೆ. ಶಾರದೆ ಮೂರ್ತಿಯ ಮುಂದೆ ದೀಪ ಬೆಳಗಿಸಿ, ಉತ್ಸವಕ್ಕೆ ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಕೃಷ್ಣ ಚಾಲನೆ ನೀಡಿದರು. ಈ ವೇಳೆ, ಕುದ್ರೋಳಿ ದೇವಸ್ಥಾನ ಆಡಳಿತ ಕಮಿಟಿ ಸದಸ್ಯರು ಸೇರಿದಂತೆ ಸೀಮಿತ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕಿಯೋನಿಕ್ಸ್ ನಿಗಮದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಉಪಸ್ಥಿತರಿದ್ದರು.
ಉಳಿದಂತೆ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಕಟ್ಟುನಿಟ್ಟಿನ ವ್ಯವಸ್ಥೆ ಮಾಡಲಾಗಿದೆ. ದೇವಸ್ಥಾನದ ಮುಂದಿನ ದ್ವಾರದಲ್ಲಿ ಸ್ಕ್ಯಾನರ್ ಅಳವಡಿಸಿದ್ದು, ತಪಾಸಣೆ ನಡೆಸಿಯೇ ಒಳಬಿಡಲಾಗುತ್ತಿದೆ. ಇನ್ನು ಮಾಸ್ಕ್ ಹಾಕಿದವರನ್ನು ಮಾತ್ರ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವೇಶ ದ್ವಾರದಲ್ಲಿ ಸ್ಯಾನಿಟೈಸರ್ ಇಟ್ಟಿದ್ದು, ಭಕ್ತರ ಕೈಗೆ ಸ್ಯಾನಿಟೈಸ್ ಮಾಡಲು ಸ್ವಯಂಸೇವಕರನ್ನು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ದೇವಸ್ಥಾನ ಒಳಭಾಗದಲ್ಲಿ ಹಗ್ಗದಿಂದ ಕಟ್ಟಲಾಗಿದ್ದು, ಯಾವುದೇ ರೀತಿಯಲ್ಲೂ ಅತ್ತಿತ್ತ ತಿರುಗಾಡುವಂತಿಲ್ಲ. ಶಾರದಾ ಮಂಟಪ, ದೇವಸ್ಥಾನಕ್ಕೆ ತೆರಳಿ ನಿರ್ಗಮನ ದ್ವಾರದ ಮೂಲಕ ಹೊರಬರಬೇಕು.
ಮಧ್ಯಾಹ್ನ ಹೊತ್ತಿಗೆ ಬರುವ ಭಕ್ತರಿಗೆ ಊಟದ ಪ್ಯಾಕೇಜ್ ನೀಡಲು ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನವಾದ ಶನಿವಾರ ಸೀಮಿತ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದಿದ್ದರು.
Photo Credit: Punik Shetty
Covid warrior Dr Arathi Krishna Inaugurated Mangalore Dasara 2020 here at Kudroli Temple on Saturday October 2017.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm