ಬ್ರೇಕಿಂಗ್ ನ್ಯೂಸ್
17-10-20 06:25 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 17: ಡ್ರಗ್ಸ್ ಜಾಲ ವಿರುದ್ಧ ಉಡುಪಿಯಲ್ಲೂ ಪೊಲೀಸರು ಬೇಟೆ ಆರಂಭಿಸಿದ್ದಾರೆ. ನಶೆಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಪೊಲೀಸರು ಅಭಿಯಾನ ಆರಂಭಿಸಿದ್ದು, ನಾಲ್ವರನ್ನು ಬಂಧಿಸಿದ್ದು 73.39 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಾರ್ಕ್ ವೆಬ್ ನೆಟ್ವರ್ಕ್ ಮೂಲಕ ಡ್ರಗ್ ಖರೀದಿ ಮಾಡುತ್ತಿದ್ದರು. ಅದಕ್ಕಾಗಿ ಬಿಟ್ ಕಾಯಿನ್ ಖರೀದಿಸಿ, ಡಾರ್ಕ್ ವೆಬ್ ನಲ್ಲಿ ಯುರೋಪ್ ರಾಷ್ಟ್ರಗಳಿಂದ ಡ್ರಗ್ ತರಿಸುತ್ತಿದ್ದರು. ಎಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಡ್ರಗ್ ವಿರುದ್ಧ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗಿದ್ದು ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವಾರಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವಿದ್ಯಾರ್ಥಿನಿ ಸಹಿತ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಣಿಪಾಲ ಸಮೀಪದ ಶಿಂಬ್ರಾದಲ್ಲಿ ಮೊದಲ ಪ್ರಕರಣ ಭೇದಿಸಲಾಗಿತ್ತು. ಆಬಳಿಕ ಬ್ರಹ್ಮಾವರ ಹಾಗೂ ಮಣಿಪಾಲ ಬಳಿ ದಾಳಿ ನಡೆಸಿದ್ದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಿಷೇಧಿತ ಎಂಡಿಎಂಎ 540 ಗ್ರಾಂ ತೂಕದ 1019 ಮಾತ್ರೆಗಳು ( ಮೌಲ್ಯ 30,57,000 ರೂ.), 1000 ಎಲ್ಎಸ್ಡಿ ಸ್ಟ್ಯಾಂಪ್ಸ್ (30,00,000 ರೂ.), 30 ಗ್ರಾಂ ತೂಕದ ಬ್ರೌನ್ ಶುಗರ್ (3,00,000) ಹಾಗೂ 131 ಗ್ರಾಂ. ತೂಕದ ಹೆಚ್ಚು ಗುಣಮಟ್ಟದ ಹೈಡ್ರೋವಿಡ್ ಗಾಂಜಾ (9,82,500 ರೂ.)ವನ್ನು ವಶಪಡಿಸಲಾಗಿದೆ ಎಂದರು.
ಜಿಲ್ಲೆಯ ಪಬ್, ರೆಸ್ಟೋರೆಂಟ್, ಹೋಟೆಲ್ ಸಹಿತ ಜನ ಸೇರುವ ಪ್ರದೇಶಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಅಬಕಾರಿ ಇಲಾಖೆಯ ಡಿಸಿ ಜೊತೆಗೆ ಸಭೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಕಾರಿಗಳ ಗಮನಕ್ಕೂ ತರಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಕುಮಾರಚಂದ್ರ, ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿವೈಎಸ್ಪಿ ಭರತ್ ಎಸ್. ರೆಡ್ಡಿ ಉಪಸ್ಥಿತರಿದ್ದರು.
Udupi district has so far recovered Narcotic drugs worth of Rs 73,39,500 said SP Visnuvardhan. No one involved in the drug trade will be spared he added.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm