ಬ್ರೇಕಿಂಗ್ ನ್ಯೂಸ್
17-10-20 06:25 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 17: ಡ್ರಗ್ಸ್ ಜಾಲ ವಿರುದ್ಧ ಉಡುಪಿಯಲ್ಲೂ ಪೊಲೀಸರು ಬೇಟೆ ಆರಂಭಿಸಿದ್ದಾರೆ. ನಶೆಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಪೊಲೀಸರು ಅಭಿಯಾನ ಆರಂಭಿಸಿದ್ದು, ನಾಲ್ವರನ್ನು ಬಂಧಿಸಿದ್ದು 73.39 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಾರ್ಕ್ ವೆಬ್ ನೆಟ್ವರ್ಕ್ ಮೂಲಕ ಡ್ರಗ್ ಖರೀದಿ ಮಾಡುತ್ತಿದ್ದರು. ಅದಕ್ಕಾಗಿ ಬಿಟ್ ಕಾಯಿನ್ ಖರೀದಿಸಿ, ಡಾರ್ಕ್ ವೆಬ್ ನಲ್ಲಿ ಯುರೋಪ್ ರಾಷ್ಟ್ರಗಳಿಂದ ಡ್ರಗ್ ತರಿಸುತ್ತಿದ್ದರು. ಎಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಡ್ರಗ್ ವಿರುದ್ಧ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗಿದ್ದು ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವಾರಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವಿದ್ಯಾರ್ಥಿನಿ ಸಹಿತ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಣಿಪಾಲ ಸಮೀಪದ ಶಿಂಬ್ರಾದಲ್ಲಿ ಮೊದಲ ಪ್ರಕರಣ ಭೇದಿಸಲಾಗಿತ್ತು. ಆಬಳಿಕ ಬ್ರಹ್ಮಾವರ ಹಾಗೂ ಮಣಿಪಾಲ ಬಳಿ ದಾಳಿ ನಡೆಸಿದ್ದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಿಷೇಧಿತ ಎಂಡಿಎಂಎ 540 ಗ್ರಾಂ ತೂಕದ 1019 ಮಾತ್ರೆಗಳು ( ಮೌಲ್ಯ 30,57,000 ರೂ.), 1000 ಎಲ್ಎಸ್ಡಿ ಸ್ಟ್ಯಾಂಪ್ಸ್ (30,00,000 ರೂ.), 30 ಗ್ರಾಂ ತೂಕದ ಬ್ರೌನ್ ಶುಗರ್ (3,00,000) ಹಾಗೂ 131 ಗ್ರಾಂ. ತೂಕದ ಹೆಚ್ಚು ಗುಣಮಟ್ಟದ ಹೈಡ್ರೋವಿಡ್ ಗಾಂಜಾ (9,82,500 ರೂ.)ವನ್ನು ವಶಪಡಿಸಲಾಗಿದೆ ಎಂದರು.

ಜಿಲ್ಲೆಯ ಪಬ್, ರೆಸ್ಟೋರೆಂಟ್, ಹೋಟೆಲ್ ಸಹಿತ ಜನ ಸೇರುವ ಪ್ರದೇಶಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಅಬಕಾರಿ ಇಲಾಖೆಯ ಡಿಸಿ ಜೊತೆಗೆ ಸಭೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಕಾರಿಗಳ ಗಮನಕ್ಕೂ ತರಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಕುಮಾರಚಂದ್ರ, ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿವೈಎಸ್ಪಿ ಭರತ್ ಎಸ್. ರೆಡ್ಡಿ ಉಪಸ್ಥಿತರಿದ್ದರು.
Udupi district has so far recovered Narcotic drugs worth of Rs 73,39,500 said SP Visnuvardhan. No one involved in the drug trade will be spared he added.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am