ಬ್ರೇಕಿಂಗ್ ನ್ಯೂಸ್
17-10-20 06:25 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 17: ಡ್ರಗ್ಸ್ ಜಾಲ ವಿರುದ್ಧ ಉಡುಪಿಯಲ್ಲೂ ಪೊಲೀಸರು ಬೇಟೆ ಆರಂಭಿಸಿದ್ದಾರೆ. ನಶೆಮುಕ್ತ ಜಿಲ್ಲೆ ನಿರ್ಮಾಣಕ್ಕಾಗಿ ಪೊಲೀಸರು ಅಭಿಯಾನ ಆರಂಭಿಸಿದ್ದು, ನಾಲ್ವರನ್ನು ಬಂಧಿಸಿದ್ದು 73.39 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿದ್ದಾರೆ.
ಈ ಬಗ್ಗೆ ಉಡುಪಿ ಎಸ್ಪಿ ಎನ್. ವಿಷ್ಣುವರ್ಧನ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ಡಾರ್ಕ್ ವೆಬ್ ನೆಟ್ವರ್ಕ್ ಮೂಲಕ ಡ್ರಗ್ ಖರೀದಿ ಮಾಡುತ್ತಿದ್ದರು. ಅದಕ್ಕಾಗಿ ಬಿಟ್ ಕಾಯಿನ್ ಖರೀದಿಸಿ, ಡಾರ್ಕ್ ವೆಬ್ ನಲ್ಲಿ ಯುರೋಪ್ ರಾಷ್ಟ್ರಗಳಿಂದ ಡ್ರಗ್ ತರಿಸುತ್ತಿದ್ದರು. ಎಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ಡ್ರಗ್ ವಿರುದ್ಧ ಕಾರ್ಯಾಚರಣೆಗಾಗಿ ವಿಶೇಷ ತಂಡ ರಚಿಸಲಾಗಿದ್ದು ಇದೇ ಮೊದಲ ಬಾರಿಗೆ ದೊಡ್ಡ ಮಟ್ಟದ ಸಿಂಥೆಟಿಕ್ ಡ್ರಗ್ ವಶಕ್ಕೆ ಪಡೆಯಲಾಗಿದೆ. ಕಳೆದ ಎರಡು ವಾರಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಓರ್ವ ವಿದ್ಯಾರ್ಥಿನಿ ಸಹಿತ ನಾಲ್ವರನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಣಿಪಾಲ ಸಮೀಪದ ಶಿಂಬ್ರಾದಲ್ಲಿ ಮೊದಲ ಪ್ರಕರಣ ಭೇದಿಸಲಾಗಿತ್ತು. ಆಬಳಿಕ ಬ್ರಹ್ಮಾವರ ಹಾಗೂ ಮಣಿಪಾಲ ಬಳಿ ದಾಳಿ ನಡೆಸಿದ್ದು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ನಿಷೇಧಿತ ಎಂಡಿಎಂಎ 540 ಗ್ರಾಂ ತೂಕದ 1019 ಮಾತ್ರೆಗಳು ( ಮೌಲ್ಯ 30,57,000 ರೂ.), 1000 ಎಲ್ಎಸ್ಡಿ ಸ್ಟ್ಯಾಂಪ್ಸ್ (30,00,000 ರೂ.), 30 ಗ್ರಾಂ ತೂಕದ ಬ್ರೌನ್ ಶುಗರ್ (3,00,000) ಹಾಗೂ 131 ಗ್ರಾಂ. ತೂಕದ ಹೆಚ್ಚು ಗುಣಮಟ್ಟದ ಹೈಡ್ರೋವಿಡ್ ಗಾಂಜಾ (9,82,500 ರೂ.)ವನ್ನು ವಶಪಡಿಸಲಾಗಿದೆ ಎಂದರು.

ಜಿಲ್ಲೆಯ ಪಬ್, ರೆಸ್ಟೋರೆಂಟ್, ಹೋಟೆಲ್ ಸಹಿತ ಜನ ಸೇರುವ ಪ್ರದೇಶಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಸಂಬಂಧ ಅಬಕಾರಿ ಇಲಾಖೆಯ ಡಿಸಿ ಜೊತೆಗೆ ಸಭೆ ನಡೆಸಿ ಅಗತ್ಯ ಕ್ರಮಕ್ಕೆ ಸೂಚಿಸಿದ್ದೇನೆ. ಈ ಬಗ್ಗೆ ಜಿಲ್ಲಾಕಾರಿಗಳ ಗಮನಕ್ಕೂ ತರಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಸ್ಪಿ ಕುಮಾರಚಂದ್ರ, ಸಹಾಯಕ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್, ಡಿವೈಎಸ್ಪಿ ಭರತ್ ಎಸ್. ರೆಡ್ಡಿ ಉಪಸ್ಥಿತರಿದ್ದರು.
Udupi district has so far recovered Narcotic drugs worth of Rs 73,39,500 said SP Visnuvardhan. No one involved in the drug trade will be spared he added.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am