ಬ್ರೇಕಿಂಗ್ ನ್ಯೂಸ್
14-01-23 02:30 pm Mangalore Correspondent ಕರಾವಳಿ
ಮಂಗಳೂರು, ಜ.14 : ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ ಮುಂದುವರೆಸುವ ಮುನ್ಸೂಚನೆ ಸಿಕ್ಕಿದೆ. ಹಿಂದು ದೇವಸ್ಥಾನಗಳ ಉತ್ಸವಗಳಿಗೆ ಅನ್ಯಧರ್ಮೀಯರನ್ನು ದೂರವಿಡುವ ಯತ್ನವಾಗಿ ಉತ್ಸವ ಸಂದರ್ಭದಲ್ಲಿ ವ್ಯಾಪಾರ ನಿಷೇಧಿಸಿ ಹಿಂದು ಸಂಘಟನೆ ಹೆಸರಲ್ಲಿ ಬ್ಯಾನರ್ ಹಾಕಲಾಗಿದೆ. ಇದೀಗ ಮಂಗಳೂರಿನ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಉತ್ಸವದಲ್ಲಿ ಹಿಂದು ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ಎಂದು ವಿಶ್ವ ಹಿಂದು ಪರಿಷತ್ ಹೆಸರಲ್ಲಿ ಬ್ಯಾನರ್ ಅಳವಡಿಸಲಾಗಿದೆ.
ಜ.14ರ ಮಕರ ಸಂಕ್ರಾಂತಿಯಿಂದ ಕಾವೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಆರಂಭಗೊಳ್ಳುತ್ತದೆ. ಉತ್ಸವ ಸಂದರ್ಭದಲ್ಲಿ ವಿವಿಧ ಮತ, ಧರ್ಮದ ನಂಬಿಕೆಯುಳ್ಳ ವ್ಯಕ್ತಿಗಳು ಜೊತೆಯಾಗಿ ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ.


ಈ ನಡುವೆ, ಜನವರಿ 10ರಂದು ‘ಮುಸ್ಲಿಮ್ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂದು ನಿರ್ದಿಷ್ಟ ಪಂಗಡವನ್ನು ಗುರಿಯಾಗಿಸಿ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರ ಗಮನಕ್ಕೆ ತಂದ ಬಳಿಕ ಬ್ಯಾನರ್ ತೆರವುಗೊಳಿಸಲಾಗಿತ್ತು. ಆದರೆ ಜ.13ರಂದು ಮತ್ತೆ ಅದೇ ರೀತಿಯ ಬ್ಯಾನರ್ ಹಾಕಲಾಗಿದೆ. ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದು ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಂ’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಬ್ಯಾನರ್ ಅಳವಡಿಸಲಾಗಿದೆ. ಆಮೂಲಕ ಮತ್ತೆ ಕರಾವಳಿಯಲ್ಲಿ ಧರ್ಮದ ಹೆಸರಿನಲ್ಲಿ ಜನರನ್ನು ಒಡೆಯುವ ಮತ್ತು ಹಿಂದುಗಳಿಂದ ಅನ್ಯ ಧರ್ಮೀಯರನ್ನು ದೂರ ಇಡುವ ಪ್ರಯತ್ನ ನಡೆದಿದೆ.

ಶಾಸಕ ಭರತ್ ಶೆಟ್ಟಿ ಪ್ರತಿನಿಧಿಸುವ ಕಾವೂರು ಮಹಾಲಿಂಗೇಶ್ವರ ದೇವಸ್ಥಾನ ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯಲ್ಲಿದೆ. ಇಲ್ಲಿ ಈ ಕಳೆದ ಬಾರಿಯೂ ಇಂತಹದ್ದೇ ಬ್ಯಾನರ್ ಹಾಕಿದ್ದ ವಿವಾದ ನಡೆದಿತ್ತು. ಕಳೆದ ಬಾರಿ ಹಿಜಾಬ್, ಧರ್ಮ ದ್ವೇಷದ ಬ್ಯಾನರ್ ಬಳಿಕ ವಿವಾದ ತಣ್ಣದಾಗಿತ್ತು. ಇದೀಗ ಚುನಾವಣೆ ಕಾಲದಲ್ಲಿ ಮತ್ತೆ ಧರ್ಮ ದ್ವೇಷ ಕದಡುವ ಬ್ಯಾನರ್ ಹಾಕಲಾಗಿದೆ.
Non Hindus not allowed to trade in Kavoor Shree Mahalingeswara Mangalore, banner sparks controversy. Those that believe that idol worship is wrong are not allowed to trade near temple premises is the banner posted by VHP. This was also decided by the temple committee.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am