ಬ್ರೇಕಿಂಗ್ ನ್ಯೂಸ್
16-01-23 09:25 pm Mangalore Correspondent ಕರಾವಳಿ
ಮಂಗಳೂರು, ಜ.16 : ವೈಟ್ ಸಿಮೆಂಟ್ ತುಂಬಿದ್ದ ಟ್ರಕ್ ಟಯರ್ ಬ್ಲಾಸ್ಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದ ಘಟನೆ ರಾ.ಹೆ. 66 ರ ಜಪ್ಪಿನಮೊಗರಿನಲ್ಲಿ ಇಂದು ಸಂಜೆ ಸಂಭವಿಸಿದೆ. ಲಾರಿಯೊಳಗಡೆ ಸಿಲುಕಿದ್ದ ಚಾಲಕನನ್ನ ಸ್ಥಳೀಯರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಒಂದೂವರೆ ತಾಸು ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.




ತಮಿಳ್ನಾಡು ಮೂಲದ ನಾಗರಾಜ್ ಎಂಬ ಟ್ರಕ್ ಚಾಲಕನನ್ನ ರಕ್ಷಿಸಲಾಗಿದೆ. ಮಂಗಳೂರಿನಿಂದ ಕೇರಳದ ಕಡೆಗೆ ವೈಟ್ ಸಿಮೆಂಟ್ ಹೊತ್ತು ಸಾಗುತ್ತಿದ್ದ ತಮಿಳುನಾಡು ನೋಂದಣಿಯ ಟ್ರಕ್ ಟಯರ್ ಜಪ್ಪಿನಮೊಗರಿನಲ್ಲಿ ಬ್ಲಾಸ್ಟ್ ಆಗಿದೆ. ನಿಯಂತ್ರಣ ತಪ್ಪಿದ ಟ್ರಕ್ ಹೆದ್ದಾರಿ ಬದಿಯ ಕಮರಿಗೆ ಉರುಳಿ ಬಿದ್ದಿದೆ. ಟ್ರಕ್ ನಲ್ಲಿದ್ದ ಕ್ಲೀನರ್ ತಕ್ಷಣ ಹೊರಕ್ಕೆ ಜಿಗಿದು ಅಪಾಯದಿಂದ ಪಾರಾಗಿದ್ದಾನೆ. ಚಾಲಕ ನಾಗರಾಜ್ ಮಾತ್ರ ಟ್ರಕ್ ಒಳಗಡೆ ಸಿಲುಕಿದ್ದು ಆತನ ಮೇಲೆ ಸಿಮೆಂಟ್ ಮೂಟೆಗಳು ರಾಶಿ ಬಿದ್ದಿದ್ದವು. ತಕ್ಷಣ ಸಹಾಯಕ್ಕೆ ಧಾವಿಸಿದ ಸ್ಥಳೀಯರು ಮೂಟೆಗಳನ್ನ ಎತ್ತಿ ಖಾಲಿ ಮಾಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಗ್ಯಾಸ್ ಕಟ್ಟರ್ ಇನ್ನಿತರ ಸಲಕರಣೆಗಳಿಂದ ನಿರಂತರ ಒಂದೂವರೆ ಗಂಟೆ ಕಾರ್ಯಾಚರಣೆ ನಡೆಸಿ ಚಾಲಕನನ್ನ ರಕ್ಷಿಸಿದ್ದಾರೆ. ತಮಿಳು ನಾಡು ಮೂಲದ ಚಾಲಕ ನಾಗರಾಜ್ ಅವರು ಸಣ್ಣ, ಪುಟ್ಟ ಗಾಯಗೊಂಡು ಪವಾಡ ಸದೃಶ ಪಾರಾಗಿದ್ದು , ಚಾಲಕ ಮತ್ತು ಕ್ಲೀನರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯರ ರಕ್ಷಣಾ ಕಾರ್ಯ ಸ್ಥಳೀಯರ ಶ್ಲಾಘನೆಗೆ ಪಾತ್ರವಾಯಿತು.
Tyre blast, cement truck falls into huge pit at Jeppinamogaru in Mangalore, driver stuck inside.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am