ಬ್ರೇಕಿಂಗ್ ನ್ಯೂಸ್
18-10-20 01:00 pm Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 18 : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಪ್ರೊಫೆಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಡಿಸಿಎಂ ಅಶ್ವತ್ಥ ನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ಕಿರುಕುಳ ಆರೋಪ ಎದುರಿಸುತ್ತಿರುವ ಪ್ರೊಫೆಸರ್ ಅರಬಿಯನ್ನು ತಕ್ಷಣದಿಂದಲೇ ಸಸ್ಪೆಂಡ್ ಮಾಡಬೇಕೆಂದು ಮಂಗಳೂರು ಯುನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್ ಸದಸ್ಯರೂ ಆಗಿರುವ ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.
2018ರಲ್ಲಿ ವಿವಿಯ ಆಂತರಿಕ ತನಿಖಾ ಸಮಿತಿ ಪ್ರೊಫೆಸರ್ ವಿರುದ್ಧ ತನಿಖೆ ನಡೆಸಿ ವರದಿ ನೀಡಿದ್ದರೂ ವಿವಿ ಆಡಳಿತ ಅದನ್ನು ಮುಚ್ಚಿ ಹಾಕಿತ್ತು. ಪ್ರೊಫೆಸರ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕಿದ್ದು ವಿದ್ಯಾರ್ಥಿಗಳಿಗೆ ತಪ್ಪು ಸಂದೇಶ ನೀಡಿದಂತಾಗಿದೆ. ಇತ್ತೀಚೆಗೆ ಕರ್ನಾಟಕ ಮಹಿಳಾ ಆಯೋಗ ವರದಿ ಕೇಳಿದ್ದರಿಂದ ವಿವಿ ಎಚ್ಚತ್ತುಕೊಂಡಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಬೇಕು ಜೊತೆಗೆ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಶಾಸಕರು ಪತ್ರದಲ್ಲಿ ಡಿಸಿಎಂ ಗಮನ ಸೆಳೆದಿದ್ದಾರೆ.
ಇದೇ ವೇಳೆ, ವಿವಿ ಕುಲಪತಿ ಪಿ.ಎಸ್ ಯಡಪಡಿತ್ತಾಯ ಟೈಂಸ್ ಆಫ್ ಇಂಡಿಯಾಗೆ ಪ್ರತಿಕ್ರಿಯಿಸಿದ್ದು ಪ್ರೊ.ಅರಬಿ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು ಕಾನೂನು ಸಲಹೆ ಕೇಳಿದ್ದೇವೆ. ಅದು ಇದೇ ಅ.19ರಂದು ಕೈಸೇರುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ಪ್ರಕರಣದ ಕುರಿತು ಮತ್ತು ಒಟ್ಟು ಬೆಳವಣಿಗೆ ಬಗ್ಗೆ ವರದಿ ಸಲ್ಲಿಸಲಾಗಿದೆ. ಏನು ಕ್ರಮ ತೆಗೆದುಕೊಳ್ಳಬಹುದು ಮತ್ತು ಒಟ್ಟು ಪ್ರಕ್ರಿಯೆಗೆ ಒಂದು ತಿಂಗಳು ಬೇಕಾಗಬಹುದು ಎಂದು ಮೀನಮೇಷದ ಮಾತನಾಡಿದ್ದಾರೆ.
ಪ್ರಕರಣದ ಬಗ್ಗೆ 2018ರಲ್ಲಿ ವಿವಿ ಆಂತರಿಕ ತನಿಖಾ ಸಮಿತಿ ವರದಿ ನೀಡಿದ್ದರೂ, ಆಗಿನ ವಿವಿ ರಿಜಿಸ್ಟ್ರಾರ್ ಪ್ರೊ.ಎ.ಎಂ. ಖಾನ್ ವರದಿಯನ್ನು ಮುಚ್ಚಿಟ್ಟ ವಿಚಾರದ ಬಗ್ಗೆ ಖಾನ್ ವಿರುದ್ಧ ಕಾರಣ ಕೇಳಿ ಶೋಕಾಸ್ ನೋಟೀಸ್ ನೀಡಲಾಗಿದೆ ಎಂದು ವಿವಿಯ ಮೂಲಗಳಿಂದ ತಿಳಿದುಬಂದಿದೆ.
Mla Bharath Shetty, Mangaluru has urged C N Ashwath Narayan, minister for higher education, to take action against professor Arabi in the department of post-graduate studies in economics, Mangalore University, accused of sexually harassing a student.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm