ಬ್ರೇಕಿಂಗ್ ನ್ಯೂಸ್
18-01-23 11:02 pm Mangalore Correspondent ಕರಾವಳಿ
ಮಂಗಳೂರು, ಜ.18: ಮೀಸಲಾತಿ ನೀಡುವುದು ದೇಶಕ್ಕೆ, ಅಭಿವೃದ್ಧಿಗೆ ಮಾರಕ ಎಂದು ತಿಳಿದಿದ್ದರೂ ರಾಜ್ಯ ಮತ್ತು ಕೇಂದ್ರ ಸರಕಾರಗಳು ಅಧಿಕಾರ ದಾಹದಿಂದ ಅವುಗಳ ತಾಳಕ್ಕೆ ಕುಣಿಯುತ್ತಿವೆ. ಈ ರೀತಿ ಮೀಸಲಾತಿ ನೀಡುತ್ತಾ ಹೋದರೆ ದೇಶದಲ್ಲಿ ಮುಂದೆ ದಂಗೆಯೇಳುವ ಸ್ಥಿತಿ ಬಂದೀತು. ಮೀಸಲಾತಿಗೆ ಹೋರಾಟ ನಡೆಸುವುದನ್ನು ನಾವು ಖಂಡಿಸುತ್ತೇವೆ. ಇದರ ಬಗ್ಗೆ ಜನಾಂದೋಲನ ರೂಪಿಸುತ್ತೇವೆ ಎಂದು ಹಿಂದು ಮಹಾಸಭಾ ರಾಜ್ಯ ಕಾರ್ಯದರ್ಶಿ ಧರ್ಮೇಂದ್ರ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಮ್ಮ ಮೂಲ ಸಂವಿಧಾನದಲ್ಲಿ ಯಾವುದೇ ಮೀಸಲಾತಿ ನೀಡುವುದನ್ನು ವಿರೋಧಿಸಲಾಗಿದೆ. ಅಲ್ಲದೆ, ಧರ್ಮಾಧರಿತ ಮೀಸಲಾತಿ ನೀಡಲೇಬಾರದು ಎಂದಿದೆ. ಆದರೆ ನಮ್ಮಲ್ಲಿ ಅಲ್ಪಸಂಖ್ಯಾತ ಹೆಸರಲ್ಲಿ ಧರ್ಮ ಆಧರಿತ ಮೀಸಲಾತಿ ಕಲ್ಪಿಸಲಾಗಿದೆ. ಧರ್ಮಕ್ಕೆ, ಜಾತಿಗೊಂದು ಮೀಸಲಾತಿ ನೀಡುತ್ತಾ ಹೋದರೆ ಸಮರ್ಥ ಯುವಜನತೆ ಅವಕಾಶ ವಂಚಿತರಾಗುತ್ತಾರೆ. ಅಧಿಕಾರ ಲಾಭ ಪಡೆಯಲು ಮೀಸಲಾತಿ ಕೊಡುವುದು, ಒಂದು ವರ್ಗವನ್ನು ಓಲೈಸುವುದು ಎಷ್ಟು ಸರಿ. ಮೀಸಲಾತಿ ಕೊಡುವದರ ಅರ್ಥ ಏನೆಂಬುದನ್ನು ರಾಜಕಾರಣಿಗಳು ಮೊದಲು ತಿಳಿದುಕೊಳ್ಳಬೇಕಿದೆ.

ಮೀಸಲಾತಿ ಹೆಸರಲ್ಲಿ ಒಂದು ಕುಟುಂಬದ ಎಲ್ಲರಿಗೂ ಸರಕಾರಿ ಹುದ್ದೆಗಳಲ್ಲಿ ಅವಕಾಶ ಕೊಡುತ್ತಾ ಹೋದರೆ, ಇತರೇ ಸಮುದಾಯಗಳು ಏನು ಮಾಡಬೇಕು. ಒಮ್ಮೆ ಮೀಸಲಾತಿ ಪಡೆದವರು ಆರ್ಥಿಕ ಸಬಲರಾದರೂ ಮತ್ತೆ ಮತ್ತೆ ತಮ್ಮ ಮಕ್ಕಳಿಗೆಲ್ಲ ಮೀಸಲಾತಿಯಿಂದ ಲಾಭ ಪಡೆಯುತ್ತಾ ಹೋದರೆ ಮೀಸಲಾತಿಗೇನು ಅರ್ಥವಿದೆ. ಇತ್ತೀಚಿನ ದಿನಗಳಲ್ಲಿ ಸ್ವಾಮೀಜಿಗಳಾದವರು ಕೂಡ ಒಂದು ಜಾತಿಯ ಪರವಾಗಿ ಮೀಸಲಾತಿಗೆ ಆಗ್ರಹಿಸುತ್ತಿದ್ದಾರೆ. ಈಡಿಗ, ಬಿಲ್ಲವರಿಗಾಗಿ ಒಬ್ಬ ಸ್ವಾಮೀಜಿ, ಪಂಚಮಸಾಲಿ ಪರ ಇನ್ನೊಬ್ಬ ಸ್ವಾಮೀಜಿ ಧ್ವನಿ ಎತ್ತುವುದಾದರೆ ಇವರು ಕಾವಿ ಹಾಕಿ ಹಿಂದು ಸಮಾಜವನ್ನು ಪ್ರತಿನಿಧಿಸುವುದು ಯಾಕೆ ಎಂದು ಧರ್ಮೇಂದ್ರ ಪ್ರಶ್ನೆ ಮಾಡಿದರು.
ಇದಕ್ಕಾಗಿ ಒಂದೋ ಆರ್ಥಿಕ ಮೀಸಲಾತಿಯನ್ನು ಮಾತ್ರ ನೀಡಬೇಕು. ಇಲ್ಲವೇ ಗ್ರಾಮಾಂತರ ಪ್ರದೇಶದವರಿಗೆ ಮೀಸಲಾತಿ ನೀಡಲಿ. ಜಾತಿಗೊಂದು ಮೀಸಲಾತಿ ನೀಡುವುದನ್ನು ವಿರೋಧಿಸಿ ನಾವು ಸಮಾನ ಮನಸ್ಕರು ಪಕ್ಷ ಭೇದ ಮರೆತು ವಿರೋಧಿಸುತ್ತೇವೆ. ಇದಕ್ಕೊಂದು ಎನ್ ಜಿಓ ಸ್ಥಾಪನೆ ಮಾಡುವ ಉದ್ದೇಶ ಇದೆ. ಜಾತ್ಯತೀತ ರಾಷ್ಟ್ರ ಎಂದ ಮೇಲೆ ಜಾತಿಗೇನು ಕೆಲಸವಿದೆ. ಜಾತಿ ಕೇಳಿ ಉದ್ಯೋಗ ಕೊಡುವುದೇ ಅಸಭ್ಯ. ಶಾಲೆ, ಕಾಲೇಜಿನಲ್ಲಿ ಜಾತಿ ಕಾಲಂ ತೆಗೆದು ಹಾಕಬೇಕು ಎಂದು ಧರ್ಮೇಂದ್ರ ಹೇಳಿದರು.
Reservation is a threat to nation slams Hindu Maha saba in Mangalore
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm