ಬ್ರೇಕಿಂಗ್ ನ್ಯೂಸ್
20-01-23 01:45 pm Mangalore Correspondent ಕರಾವಳಿ
ಮಂಗಳೂರು, ಜ.20 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಪತ್ತೆಗೆ ಎನ್ಐಎ ಹತ್ತು ಲಕ್ಷ ಬಹುಮಾನ ಘೋಷಣೆ ಮಾಡಿದೆ.
ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮೊಹಮ್ಮದ್ ಷರೀಫ್(53) ಮತ್ತು ಮಿತ್ತೂರು ಕಮ್ಯುನಿಟಿ ಸೆಂಟರಿನ ಮಸೂದ್ ಕೆ.ಎ. ಅಗ್ನಾಡಿ (40) ಪತ್ತೆಗೆ ತಲಾ 5 ಲಕ್ಷ ಬಹುಮಾನ ಘೋಷಣೆ ಮಾಡಲಾಗಿದೆ. ಇವರಿಬ್ಬರು ಕೂಡ ನಿಷೇಧಿತ ಪಿಎಫ್ಐ ಸಂಘಟನೆಯ ನಾಯಕರಾಗಿದ್ದರು. ವಿಟ್ಲ ಬಳಿಯ ಮಿತ್ತೂರಿನ ಕಮ್ಯುನಿಟಿ ಸೆಂಟರಿಗೆ ಪಿಎಫ್ಐ ನಿಷೇಧ ಸಂದರ್ಭದಲ್ಲಿ ದಾಳಿ ನಡೆದಿತ್ತು. ಪಿಎಫ್ಐ ಕಾರ್ಯಕರ್ತರ ಸಭೆ, ತರಬೇತಿ ಕಮ್ಯುನಿಟಿ ಸೆಂಟರಿನಲ್ಲಿ ನಡೀತಿತ್ತು ಎನ್ನುವುದು ತನಿಖೆಯಲ್ಲಿ ಕಂಡುಬಂದಿದ್ದರಿಂದ ಆ ಸೆಂಟರನ್ನು ಜಿಲ್ಲಾಡಳಿತ ಸೀಲ್ ಮಾಡಿತ್ತು.

ಆ ಕಮ್ಯುನಿಟಿ ಸೆಂಟರನ್ನು ಮಸೂದ್ ಅಗ್ನಾಡಿ ನಡೆಸುತ್ತಿದ್ದ ಎನ್ನುವ ವಿಚಾರವೂ ಅಂದು ಹರಿದಾಡಿತ್ತು. ಆನಂತರ, ಮಸೂದ್ ಪೊಲೀಸರ ವಿಚಾರಣೆಗೆ ಸಿಗದೆ ತಲೆಮರೆಸಿಕೊಂಡಿದ್ದ. ಎನ್ಐಎ ಅಧಿಕಾರಿಗಳು ಇದೀಗ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿಯೂ ಮಸೂದ್ ಪಾತ್ರ ಕಂಡುಕೊಂಡಿದ್ದು ಆತನ ಪತ್ತೆಗಾಗಿ ಈಗ ಐದು ಲಕ್ಷ ಬಹುಮಾನ ಘೋಷಣೆ ಮಾಡಿದ್ದಾರೆ.

ಇವರ ಬಗ್ಗೆ ಮಾಹಿತಿ ಇದ್ದರೆ ಬೆಂಗಳೂರಿನ ದೊಮ್ಮಲೂರು ಬಳಿ ಇರುವ ಎನ್ಐಎ ಕಚೇರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣದಲ್ಲಿ ಈ ಹಿಂದೆ ನಾಲ್ವರು ಆರೋಪಿಗಳ ಪತ್ತೆಗಾಗಿ ಎನ್ಐಎ 14 ಲಕ್ಷ ಬಹುಮಾನ ಘೋಷಿಸಿತ್ತು. ಆರೋಪಿಗಳು ತಲೆಮರೆಸಿಕೊಂಡಿದ್ದು ಇನ್ನೂ ಕೂಡ ಯಾವುದೇ ಸುಳಿವು ಸಿಕ್ಕಿಲ್ಲ.
The National Investigation Agency (NIA) has announced a cash prize of Rs 5 lac for helping the agency find the whereabouts of two more accused in the murder case of BJP Yuva Morcha leader Praveen Nettaru. Mohammed Sharif and Masood have been identified as accused in the murder case.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm