ಬ್ರೇಕಿಂಗ್ ನ್ಯೂಸ್
21-01-23 09:47 pm Mangalore Correspondent ಕರಾವಳಿ
ಪುತ್ತೂರು, ಜ.21 : ಅಡಿಕೆ ಕ್ಯಾನ್ಸರ್ ಕಾರಕ ಎನ್ನುವ ಆರೋಪದ ಪ್ರಕರಣ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮುಂದಿನ ವಿಚಾರಣೆ ವೇಳೆಗೆ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ ಎಂಬ ಸಂಶೋಧನಾ ವರದಿಯನ್ನು ಕೋರ್ಟಿಗೆ ಸಲ್ಲಿಸಲಾಗುವುದು ಎಂದು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದ್ದಾರೆ.
ಶನಿವಾರ ಪುತ್ತೂರಿನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಪ್ರಶ್ನೆಗೆ ಉತ್ತರಿಸಿದ ಅವರು, ಅಡಿಕೆ ಕ್ಯಾನ್ಸರ್ಕಾರಕ ಅಲ್ಲ ಎಂಬುದನ್ನು ಸಂಶೋಧನೆ ಮಾಡುವ ಬಗ್ಗೆ ನಿಟ್ಟೆ ವಿಶ್ವವಿದ್ಯಾಲಯದ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದರ ಬಗ್ಗೆ ಸಂಶೋಧನೆ ನಡೆಯುತ್ತಿದೆ. ಅದೇ ರೀತಿ ಬೆಂಗಳೂರಿನ ರಾಮ ಇನ್ಸ್ಟಿಟ್ಯೂಟ್ ಜೊತೆಗೂ 2 ವರ್ಷಗಳ ಹಿಂದೆ ಒಪ್ಪಂದ ಮಾಡಿಕೊಳ್ಳಲಾಗಿದ್ದು, ಅಡಿಕೆ ಕ್ಯಾನ್ಸರ್ಕಾರಕ ಅಲ್ಲ ಎಂದು ಸಾಬೀತು ಪಡಿಸಲು ಸಂಶೋಧನೆ ನಡೆಯುತ್ತಿದೆ. ಹಂತ ಹಂತವಾಗಿ ವರದಿಗಳು ಬರುತ್ತಿದ್ದು, ನ್ಯಾಯಾಲಯದ ಮುಂದಿನ ವಿಚಾರಣೆ ವೇಳೆ ಈ ವರದಿಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ರೂಪಿಸಲಾದ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನ (ಎಆರ್ಡಿಎಫ್) ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತಿದೆ. ರೋಗ ಸಂಶೋಧನೆ, ಬೆಂಬಲ ಬೆಲೆ, ಅಕ್ರಮ ಆಮದು ತಡೆ, ಗುಣಮಟ್ಟ ಪರಿಶೀಲನೆ ಇತ್ಯಾದಿ ಕ್ಷೇತ್ರದಲ್ಲಿ ಎಆರ್ಡಿಎಫ್ ಉತ್ತಮವಾದ ಕೆಲಸ ಮಾಡಿದೆ. ಇನ್ನಷ್ಟು ಕೆಲಸ ಮಾಡಲು ಪ್ರತಿಷ್ಠಾನದಲ್ಲಿ ಹಣದ ಕೊರತೆ ಇದೆ ಎಂದು ಹೇಳಿದರು.

ಅಡಿಕೆ ಹಳದಿ ರೋಗ ಸಂಶೋಧನೆಗೆ ಸಂಬಂಧಿಸಿ ಸರ್ಕಾರ ಬಿಡುಗಡೆ ಮಾಡಿದ 25 ಕೋಟಿ ರೂಪಾಯಿಗೂ ಕ್ಯಾಂಪ್ಕೋ ಸಂಸ್ಥೆಗೂ ಸಂಬಂಧವಿಲ್ಲ. ಅದನ್ನು ತೋಟಗಾರಿಕಾ ಇಲಾಖೆ ಮೂಲಕ ನಿರ್ವಹಿಸಲಾಗುತ್ತದೆ. ಎಲೆ ಚುಕ್ಕಿ ರೋಗದಿಂದ ತುತ್ತಾಗಿರುವ ರೈತರಿಗೆ ಪರಿಹಾರ ಕೊಡುವ ಬಗ್ಗೆ ಕ್ಯಾಂಪ್ಕೋ ಸರ್ಕಾರಕ್ಕೆ ಪತ್ರ ಬರೆದಿದೆ ಎಂದು ಹೇಳಿದರು. ಎಲೆ ಚುಕ್ಕಿ ರೋಗಕ್ಕೆ ಸಂಬಂಧಪಟ್ಟಂತೆ ಕಳೆದ ನವೆಂಬರ್ನಲ್ಲಿ ಮಂಗಳೂರಿನಲ್ಲಿ ವಿಜ್ಞಾನಿಗಳನ್ನು ಕರೆಸಿ ವಿಚಾರ ಸಂಕಿರಣ ನಡೆಸಿದ್ದೆವು, ಇದರ ಆಧಾರದ ಮೇಲೆ ಸಂಶೋಧನೆಗೆ ಸೆಂಟ್ರಲ್ ಕಮಿಟಿ ನಿರ್ಮಾಣವಾಗಿದೆ, ಆ ಕಮಿಟಿಯ ಶಿಫಾರಸ್ಸಿಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದರು.

ದಿವಂಗತ ಸುಭ್ರಾಯ್ ಭಟ್ಟರು ಮತ್ತು ಸಾಗರದ ಎಲ್ ಟಿ ತಿಮ್ಮಪ್ಪ ಹೆಗಡೆಯವರ ಸಹಕಾರದಿಂದ ಕ್ಯಾಂಪ್ಕೋ ಸಂಸ್ಥೆ ಈ ಹಂತಕ್ಕೆ ಬಂದು ತಲುಪಿದೆ, ಸುವರ್ಣ ಮಹೋತ್ಸವ ಅಂಗವಾಗಿ ಕ್ಯಾಂಪ್ಕೋ ಫ್ಯಾಕ್ಟರಿಯಲ್ಲಿ ತೆಂಗಿನ ಕಾಯಿಗಳಿಂದ ಉತ್ಪನ್ನ ತಯಾರಿಸಲು ನೂತನ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ ಎಂದು ತಿಳಿಸಿದರು
Areca nut is not cancerous says CAMPCO president Kishor in Puttur.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm