ಬ್ರೇಕಿಂಗ್ ನ್ಯೂಸ್
23-01-23 12:38 pm Mangalore Correspondent ಕರಾವಳಿ
ಮಂಗಳೂರು, ಜ.23 : ಒಂದು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣೆ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಎಂಬಲ್ಲಿ ನಡೆದಿದೆ.
ದಿವ್ಯಾ(26) ಮೃತ ಯುವತಿ. ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್ ಮತ್ತು ಗಿರಿಜಾ ದಂಪತಿಯ ಪುತ್ರಿ ದಿವ್ಯಾ(26) ಒಂದು ವರ್ಷದ ಹಿಂದೆ ಹರೀಶ್ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದರು. ದಿವ್ಯಾ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರೆ, ಪತಿ ಹರೀಶ್ ಸುರತ್ಕಲ್ ನಲ್ಲಿ ಆಟೋ ಓಡಿಸುತ್ತಿದ್ದರು.
ಜನವರಿ 21ರಂದು ರಾತ್ರಿ ದಿವ್ಯಾ ಮತ್ತು ಪತಿ ಹರೀಶ್ ನೆರೆಮನೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿದ್ದಾಗ ದಂಪತಿ ನಡುವೆ ಮನಸ್ತಾಪ ಉಂಟಾಗಿದ್ದು ಇದರಿಂದ ಬೇಸರಗೊಂಡಿದ್ದ ದಿವ್ಯಾ ರಾತ್ರಿ ಒಬ್ಬಳೇ ಮನೆಗೆ ಹಿಂದಿರುಗಿದ್ದರು. ಹರೀಶ್ ಆಬಳಿಕ ಬರುತ್ತೇನೆಂದು ಅಲ್ಲಿಯೇ ಉಳಿದಿದ್ದರು. ಇದರಿಂದ ಅಸಮಾಧಾನಗೊಂಡಿದ್ದ ದಿವ್ಯಾ ಜ.22ರಂದು ಸಂಜೆ ತನ್ನ ಮನೆಯ ಬೆಡ್ ರೂಂನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತರ ತಾಯಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.
ಮನೆಯ ಬೆಡ್ ರೂಮ್ ಕಿಟಕಿಯಲ್ಲಿ ಶಾಲನ್ನು ಕುತ್ತಿಗೆಗೆ ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore Surathkal, 26 year old married woman commits suicide. The deceased has been identified as Divya. It is said she was married a year ago and was working in a medical shop. Some clash during a function at the neighbours house between husband and wife has resulted in suicide.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm