ಬ್ರೇಕಿಂಗ್ ನ್ಯೂಸ್
24-01-23 08:14 pm Mangalore Correspondent ಕರಾವಳಿ
ಮಂಗಳೂರು, ಜ.24 : ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಲೀಧರ ರೈ(37) ಹೃದಯಾಘಾತದಿಂದ ಸಾವನ್ನಪ್ಪಿದ್ದು ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.
ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದು ನಿನ್ನೆ ಮುಂಜಾನೆ ಮಲಗಿದ್ದಾಗಲ್ಲೇ ಹೃದಯಾಘಾತದಿಂದ ಮುರಲೀಧರ ರೈ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿ ಗೌರವ ಸಲ್ಲಿಸಿದ್ದಾರೆ. ಆಬಳಿಕ ಎ.ಜೆ ಆಸ್ಪತ್ರೆಯ ಶವಗಾರಕ್ಕೆ ಮೃತ ಯೋಧನ ಪಾರ್ಥಿವ ಶರೀರ ರವಾನಿಸಲಾಗಿದೆ.


ನಾಳೆ(ಜ.25) ಶಕ್ತಿನಗರದ ಯೋಧನ ಮನೆಯಲ್ಲಿ ಅಂತಿಮ ದರ್ಶನ ಮತ್ತು ಅಂತ್ಯ ಸಂಸ್ಕಾರದ ವಿಧಿಗಳು ನಡೆಯಲಿದೆ. 2007 ರಲ್ಲಿ ಕಾನ್ಸ್ಟೇಬಲ್ ಆಗಿ ಸಶಸ್ತ್ರ ಸೀಮಾ ಬಲ್ ಗೆ ಸೇರ್ಪಡೆಯಾಗಿದ್ದ ಮುರಲೀಧರ್ ರೈ, ಹವಾಲ್ದಾರ್ ಆಗಿ ಭೋಪಾಲ್ ನಲ್ಲಿ ಕರ್ತವ್ಯದಲ್ಲಿದ್ದರು. ತಿಂಗಳ ರಜೆಯ ಮೇಲೆ ಜ.24ರಂದು ಊರಿಗೆ ಬರುವವರಿದ್ದರು. ಮುರಲೀಧರ್ ಅವರು ಪತ್ನಿ ಮತ್ತು ಆರು ತಿಂಗಳ ಮಗುವನ್ನು ಅಗಲಿದ್ದಾರೆ.
A 37-year-old soldier from Shaktinagar, Muralidhar Rai, died of a heart attack in Bhopal here on January 23. The mortal remains of Muralidhar arrived at the Mangalore International Airport on January 24. The District Administration paid the last respect to the soldier at the martyr’s memorial at Mangaluru International Airport.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm