ಬ್ರೇಕಿಂಗ್ ನ್ಯೂಸ್
24-01-23 10:42 pm Mangalore Correspondent ಕರಾವಳಿ
ಮಂಗಳೂರು, ಜ.24: ವಿಧಾನಸಭೆ ಚುನಾವಣೆ ಪೂರ್ವಭಾವಿ ತಯಾರಿ ಕುರಿತಾಗಿ ಆರು ಜಿಲ್ಲೆಗಳ ವಿಧಾನಸಭೆ ಅಭ್ಯರ್ಥಿ ಆಕಾಂಕ್ಷಿಗಳು, ನಾಯಕರ ಜೊತೆಗೆ ಜ.25ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಮತ್ತು ಬಿಕೆ ಹರಿಪ್ರಸಾದ್ ಚರ್ಚೆ ನಡೆಸಲಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಮತ್ತು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, 2019ರ ಲೋಕಸಭೆ ಚುನಾವಣೆಯ ಅಭ್ಯರ್ಥಿಗಳು, 2018ರ ಚುನಾವಣೆಯ ಅಭ್ಯರ್ಥಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಚುನಾವಣೆ ತಯಾರಿ, ಪ್ರಚಾರ ಕಾರ್ಯ, ಪ್ರಣಾಳಿಕೆ ವಿಚಾರಗಳ ಬಗ್ಗೆ ವಿಚಾರ ವಿಮರ್ಶೆ ನಡೆಯಲಿದೆ ಎಂದು ಹೇಳಿದ್ದಾರೆ.
ಎಂಟು ವರ್ಷಗಳ ಬಿಜೆಪಿ ಆಡಳಿತದ ವೈಫಲ್ಯಗಳು, ಭ್ರಷ್ಟಾಚಾರದ ಬಗ್ಗೆ ಜನರಿಗೆ ಮನವರಿಕೆ ಮಾಡುವುದು, ಕಾಂಗ್ರೆಸ್ ಅವಧಿಯ ಸಾಧನೆಗಳ ಬಗ್ಗೆ ಜನರಿಗೆ ತಿಳಿಸುವ ಕಾರ್ಯಕ್ರಮ ಏರ್ಪಡಿಸಲಾಗುವುದು. ಮುಂದಿನ ಹಂತದಲ್ಲಿ ವಿಧಾನಸಭೆ ಮಟ್ಟದಲ್ಲಿ ಸಭೆ ನಡೆಸುವ ಬಗ್ಗೆಯೂ ಚರ್ಚಿಸಲಾಗುವುದು. ಅಭ್ಯರ್ಥಿ ಬಗ್ಗೆ ಚಿಂತಿಸದೆ ಚುನಾವಣೆಗೆ ತಯಾರಿ ನಡೆಸುವುದಕ್ಕೆ ಪಕ್ಷವನ್ನು ಸಜ್ಜುಗೊಳಿಸಲಾಗುವುದು ಎಂದು ಹೇಳಿದರು.
ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಕರಾವಳಿಗೆ ಸೀಮಿತವಾಗಿ ಎಂಟು ಅಂಶಗಳ ವಿಶೇಷ ಕಾರ್ಯಕ್ರಮವನ್ನು ಮುಂದಿಟ್ಟಿದ್ದೇವೆ. ಅದಷ್ಟೇ ಅಲ್ಲದೆ, ಆಯಾ ಕ್ಷೇತ್ರಗಳ ಜನರ ಆಶೋತ್ತರಗಳ ಬಗ್ಗೆ ಚರ್ಚೆ ನಡೆಸಿ ಒಟ್ಟು 200 ಅಂಶಗಳ ಸಮಗ್ರ ಪ್ರಣಾಳಿಕೆ ರಚಿಸಲಾಗುವುದು. ಆ ನಿಟ್ಟಿನಲ್ಲಿ ಜನರ ಅಭಿಪ್ರಾಯ ಪಡೆಯಲಾಗುವುದು. ಪ್ರಜಾಧ್ವನಿ ಕಾರ್ಯಕ್ರಮ ಯಶಸ್ಸಿಗೆ ದುಡಿದ ಸರ್ವರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹರೀಶ್ ಕುಮಾರ್ ಹೇಳಿದರು.
Election List of candidates to be announced on Jan 25th by Randeep Surjewala in Mangalore Manjunath Bhandary.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am