ಬ್ರೇಕಿಂಗ್ ನ್ಯೂಸ್
29-01-23 04:30 pm Mangalore Correspondent ಕರಾವಳಿ
ಮಂಗಳೂರು, ಜ.29 : ಎಸ್ಸಿಡಿಸಿಸಿ ಬ್ಯಾಂಕ್ ಕೊಡಿಯಾಲ್ ಬೈಲಿನ ಪ್ರಧಾನ ಕಚೇರಿಯ ಉದ್ಯೋಗಿಯೊಬ್ಬರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಗರದ ಕೆ.ಎಸ್.ರಾವ್ ರಸ್ತೆಯ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಅಕೌಂಟ್ ಸೆಕ್ಷನ್ನಲ್ಲಿ ಉದ್ಯೋಗಿಯಾಗಿದ್ದ ಪುತ್ತೂರು ಮೂಲದ ಜಗದೀಶ್ ರೈ(50) ಮೃತರು. ಬ್ಯಾಂಕಿನಲ್ಲಿ ಕಳೆದ 23 ವರ್ಷಗಳಿಂದ ಉದ್ಯೋಗಿಯಾಗಿದ್ದ ಅವರು ಬೋಳಾರದ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದರು. ಪತ್ನಿ ಮಂಗಳೂರಿನ ಪಿಎಫ್ ಕಚೇರಿಯಲ್ಲಿ ಉದ್ಯೋಗಿಯಾಗಿದ್ದು ಇವರಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿಗೆ ಯಾವುದೇ ಹಣಕಾಸಿನ ತೊಂದರೆ ಇರಲಿಲ್ಲ. ಜಗದೀಶ್ ಅವರಿಗೆ ಯಾವುದೇ ದುರಭ್ಯಾಸವೂ ಇರಲಿಲ್ಲ.
ನಿನ್ನೆ ರಾತ್ರಿ ಬೋಳಾರದ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕಿನಲ್ಲಿ ಕೆಲಸದ ಒತ್ತಡದಿಂದಾಗಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಆದರೆ ಒತ್ತಡ ಇರುವ ಬಗ್ಗೆ ಡೆತ್ ನೋಟ್ ನಲ್ಲಿ ಬರೆದಿಲ್ಲ. ಬದಲಿಗೆ, ತನ್ನ ಸಾವಿಗೆ ತಾನೇ ಕಾರಣ. ಪತ್ನಿ ಮತ್ತು ಇನ್ನೊಬ್ಬ ಮಗಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಇಂಜಿನಿಯರಿಂಗ್ ಓದುವ ಮಗನಿಗೆ ಪತ್ರ ಬರೆದಿಟ್ಟಿದ್ದಾರೆ. ಸ್ಥಳೀಯರು, ಸಂಬಂಧಿಕರು, ಡಿಸಿಸಿ ಬ್ಯಾಂಕಿನ ಉದ್ಯೋಗಿಗಳು ಜಗದೀಶ್ ಸಾವಿನ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದರು. ಪಾಂಡೇಶ್ವರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ಎಂದಷ್ಟೆ ದಾಖಲಾಗಿದೆ.
Mangalore SCDCC bank Kodailbail branch senior accountant commits suicide at his residence. The deceased has been identified as Jagadish Rai (50). Reason for his death unknown. Pressure from the Bank is said to be the reason for his death alleges family and relatives. A case has been registered at Pandeshwar Police Station.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm