ಬ್ರೇಕಿಂಗ್ ನ್ಯೂಸ್
31-01-23 07:42 pm Mangalore Correspondent ಕರಾವಳಿ
ಮಂಗಳೂರು, ಜ.31 : ದಕ್ಷಿಣ ಕನ್ನಡ-ಉಡುಪಿ- ಮಂಜೇಶ್ವರ-ಕಾಸರಗೋಡು- ಕಾಞಂಗಾಡ್ ಜಿಲ್ಲೆಗಳಲ್ಲಿ ಬೀಡಿ ಗುತ್ತಿಗೆದಾರರಾಗಿ ಸುಮಾರು 5 ಸಾವಿರದಷ್ಟು ಸದಸ್ಯರಿದ್ದಾರೆ. ಜಿಲ್ಲೆಯಲ್ಲಿ ವಿವಿಧ ಮಾರ್ಕಿನ ಬೀಡಿ ಸಂಸ್ಥೆಯಿಂದ ಗುತ್ತಿಗೆದಾರರು ಎಲೆ ತಂಬಾಕು ಇತರ ವಸ್ತುಗಳನ್ನು ಪಡೆದು ಅದನ್ನು ಬೀಡಿ ಕಾರ್ಮಿಕರಿಗೆ ವಿತರಿಸಿ ಅದರಿಂದ ತಯಾರಾದ ಬೀಡಿಯನ್ನು ಕಾರ್ಮಿಕರಿಂದ ಪಡೆದು ಆಯಾಯ ಕಂಪೆನಿಗಳಿಗೆ ತಲುಪಿಸುವ ಕೆಲಸ ಗುತ್ತಿಗೆದಾರರದ್ದಾಗಿದೆ. ಅವರ ದುಡಿಮೆಗೆ ಕೇವಲ ಒಂದು
ಸಾವಿರ ಬೀಡಿಯ ಮೇಲೆ ಕಮಿಷನ್ ಮಾತ್ರ ನೀಡಲಾಗಿದ್ದು, ಬೇರೆ ಯಾವುದೇ ಸೌಲಭ್ಯವಿರುವುದಿಲ್ಲ
ಬೀಡಿ ಗುತ್ತಿಗೆದಾರರ ವಿವಿಧ ಸಂಘಟನೆಗಳು ಪ್ರತಿವರ್ಷ ಹೆಚ್ಚುವರಿ ಕಮಿಷನ್ಗಾಗಿ ಆಡಳಿತ ವರ್ಗಕ್ಕೆ ಮನವಿಯ ಮೂಲಕ ಒತ್ತಾಯಿಸುತ್ತಿದ್ದರೂ ಆಡಳಿತ ವರ್ಗ ಎಪ್ರಿಲ್ನಲ್ಲಿ ಹೆಚ್ಚುವರಿ ಕಮಿಷನ್ ನೀಡದೇ ಸತಾಯಿಸಿ ಡಿಸೆಂಬರ್ ಜನವರಿಯಲ್ಲಿ ನೀಡುತ್ತಾ ಬಂದಿದೆ. ಈ ಬಾರಿ 2022/23 ರ ಅವಧಿಗೆ ರೂಪಾಯಿ 10ನ್ನು ಹೆಚ್ಚುವರಿಯಾಗಿ ನೀಡಲು
ಒತ್ತಾಯಿಸಲಾಯಿತು. ಅದರಂತೆ ಕಳೆದ ಜ.5ರಂದು ವಿವಿಧ ಬೀಡಿ ಗುತ್ತಿಗೆದಾರರು ಜಂಟಿಯಾಗಿ ಜ.16 ರ ಒಳಗೆ ಹೆಚ್ಚುವರಿ ಕಮಿಷನ್ ನೀಡಲು ಮನವಿ ಸಲ್ಲಿಸಿದ್ದರೂ ಆಡಳಿತ ವರ್ಗ ಯಾವುದೇ ಕ್ರಮ ಜರುಗಿಸದೆ ದಬ್ಬಾಳಿಕೆ ನಡೆಸುತ್ತಿದೆ" ಎಂದು ಬೀಡಿ ಗುತ್ತಿಗೆದಾರರ ಒಕ್ಕೂಟದ ಕಾರ್ಯಾಧ್ಯಕ್ಷ ಮಹಮ್ಮದ್ ರಫಿ ಆರೋಪಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತಾಡಿದ ಅವರು, ಜ.17ರಂದು ಮಾಲಕರ ಒಕ್ಕೂಟದ ಅಧ್ಯಕ್ಷರ ಅನುಮತಿಯಂತೆ ಜ.30ರಂದು ಜಂಟಿ ಸಭೆ ಕರೆದು ಹೋರಾಟ ನಡೆಸುವ ಕುರಿತು ಚರ್ಚಿಸಲಾಗಿದ್ದು ಒಕ್ಕೂಟದ ಕಾರ್ಯದರ್ಶಿ ಬಿ. ಸತೀಶ್ ಪೈಯವರು ವಿವಿಧ ಬೀಡಿ ಗುತ್ತಿಗೆದಾರರ ಸಂಘಟನೆಗಳ ಅಧ್ಯಕ್ಷರುಗಳಿಗೆ ಮೆಸೇಜ್ ರವಾನಿಸಿದ್ದು ಅದರಂತೆ ಜಂಟಿ ಸಭೆ ರದ್ದುಗೊಂಡಿತ್ತು. ಆದ್ದರಿಂದ ಫೆ.10ರೊಳಗೆ ಮಾತುಕತೆಗೆ ಆಹ್ವಾನ ನೀಡದಿದ್ದಲ್ಲಿ ಅಂದಿನಿಂದ 3 ಜಿಲ್ಲೆಗಳ ಬೀಡಿ ಗುತ್ತಿಗೆದಾರರು ಕೆಲಸ ಸ್ಥಗಿತಗೊಳಿಸಿ, ಬೇಡಿಕೆ ಈಡೇರುವ ತನಕ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದು. ಸುಮಾರು 60 ಡಿಪೋಗಳ ಎದುರು ಧರಣಿ ಸತ್ಯಾಗ್ರಹ, ಬೀಡಿ, ಎಲೆ, ತಂಬಾಕು, ಲೇಬಲ್ ಬೀಡಿ, ಸಾಗಾಟಕ್ಕೆ ತಡೆಹಿಡಿದು ಮಂಗಳೂರು ಗಣೇಶ್ ಬೀಡಿ ಕಚೇರಿ ಮತ್ತು ಭಾರತ್ ಬೀಡಿ ಸಮೂಹ ಸಂಸ್ಥೆಯ ಎದುರು ಬೀಡಿ ಗುತ್ತಿಗೆದಾರರು ಮತ್ತು ಬೀಡಿ ಕಾರ್ಮಿಕರನ್ನು ಒಗ್ಗೂಡಿಸಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಗೌರವಾಧ್ಯಕ್ಷ ಎಂ. ಸುರೇಶ್ಚಂದ್ರ ಶೆಟ್ಟಿ, ಅಧ್ಯಕ್ಷರಾದ ರವಿ ಉಡುಪಿ, ಹರೀಶ್ ಕೆ.ಎಸ್., ಕೃಷ್ಣಪ್ಪ ತೊಕ್ಕೊಟ್ಟು, ಗಂಗಾಧರ್ ಶೆಟ್ಟಿ, ಕೃಷ್ಣ ಕಾಸರಗೋಡು ಹಾಗೂ ಕರ್ನಾಟಕ ರಾಜ್ಯ ಬೀಡಿ ಕಂಟ್ರಾಕ್ಟ್ರುದಾರರ ಸಂಘ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟ್ರುದಾರರ ಸಂಘ, ಸೌತ್ ಕೆನರಾ-ಉಡುಪಿ ಜಿಲ್ಲಾ ಬೀಡಿ ಕಂಟ್ರಾಕ್ಟರ್ ಯೂನಿಯನ್(ರಿ), ಜಯಕರ್ನಾಟಕ ಬೀಡಿ ಗುತ್ತಿಗೆದಾರರ ಸಂಘ ಪುತ್ತೂರು, ಕಾಸರಗೋಡು ಜಿಲ್ಲಾ ಬೀಡಿ ಗುತ್ತಿಗೆದಾರರ ಸಂಘ, ಕಾಸರಗೋಡು ಜಿಲ್ಲೆ ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.
Mangalore Beedi contractors warn of protest if there is no raise in commission.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm