ಬ್ರೇಕಿಂಗ್ ನ್ಯೂಸ್
31-01-23 08:17 pm Mangalore Correspondent ಕರಾವಳಿ
ಉಳ್ಳಾಲ, ಜ.31 : ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಫಾಝಿಲನ್ನ ನಮ್ಮ ಹುಡುಗರೇ ಹತ್ಯೆಗೈದಿದ್ದಾರೆಂದು ಪ್ರಚೋದನಕಾರಿ ಭಾಷಣ ಮಾಡಿದ ಶರಣ್ ಪಂಪ್ವೆಲ್ ಬಂಧಿಸದಂತೆ ಪೊಲೀಸರ ಮೇಲೆ ರಾಜಕೀಯ ಒತ್ತಡವಿದ್ದು ಸ್ವತಂತ್ರವಾಗಿ ಕೆಲಸ ಮಾಡದ ಪೊಲೀಸ್ ವ್ಯವಸ್ಥೆ ಇದ್ದೇನು ಪ್ರಯೋಜನ ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
ತೊಕ್ಕೊಟ್ಟಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು. ಭಾನುವಾರ ಉಳ್ಳಾಲ ಬೈಲಲ್ಲಿ ನಡೆದ ಶೌರ್ಯ ಯಾತ್ರೆ ಬಹಿರಂಗ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೋಮವಾರ ಉಳ್ಳಾಲ ಠಾಣೆಗೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ನಿಂದ ದೂರು ನೀಡಲಾಗಿದೆ. ಆದರೆ ಪೊಲೀಸರು ಎಫ್ಐಆರ್ ದಾಖಲಿಸಲು ಮೀನ ಮೇಷ ಎಣಿಸುತ್ತಿದ್ದಾರೆ. ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕೇಸು ದಾಖಲಿಸದಂತೆ ಪೊಲೀಸರ ಮೇಲೆ ಗೃಹ ಸಚಿವರ ಒತ್ತಡ ಇದೆ ಎಂದರು.
ಶರಣ್ ಪಂಪ್ವೆಲ್ಗೆ ಉಳ್ಳಾಲದಲ್ಲಿ ಚುನಾವಣೆ ಸ್ಪರ್ಧಿಸುವುದಿದ್ದರೆ ಬಂದು ನೇರವಾಗಿ ಸ್ಪರ್ಧಿಸಲಿ. ಅದು ಬಿಟ್ಟು ಧರ್ಮಗಳ ಮಧ್ಯೆ ಕೋಮು ವಿಷ ಬಿತ್ತುವ ಹೇಳಿಕೆ ನೀಡಿ ಸಮಾಜ ಒಡೆಯುವ ಕೆಲಸವನ್ನು ಮಾಡುವುದು ಸರಿಯಲ್ಲ. ಶರಣ್ ಪಂಪ್ವೆಲ್ ಹಿಂದೂ ಧರ್ಮವನ್ನ ಗುತ್ತಿಗೆ ಪಡೆದಂತಿದೆ. ಹಿಂದೂಗಳ ಮೇಲೆ ಅಷ್ಟು ಕಾಳಜಿ ಇದ್ದರೆ ಜನಸಾಮಾನ್ಯರ ಮೂಲಭೂತ ಸೌಕರ್ಯಗಳು, ಆರೋಗ್ಯ, ಶಿಕ್ಷಣದ ಬಗ್ಗೆ ಸ್ಪಂದಿಸಲಿ ಎಂದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುರೇಶ್ ಭಟ್ನಗರ, ಹಿಂದುಳಿದ ವರ್ಗದ ಅಧ್ಯಕ್ಷರಾದ ದೀಪಕ್ ಕುಲಾಲ್, ಕಿಸಾನ್ ಘಟಕ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ ಪ್ರಮುಖರಾದ ಹರೀಶ್ ಮೊಗವೀರ ಪತ್ರಿಕಾಗೋಷ್ಟಿಯಲ್ಲಿದ್ದರು.
Ullal block Congress submitted an appeal to Ullal police station, urging the police department to arrest and take suitable legal action against VHP leader Sharan Pumpwell, for provocative speech as the elections are nearing and giving public statement that Mohammed Fazil was killed by VHP in retaliation to the murder of Praveen Nettaru. In addition, the appeal also said that Sharan is publicly giving statements with the intention of disturbing communal harmony of the society.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm