ಬ್ರೇಕಿಂಗ್ ನ್ಯೂಸ್
01-02-23 12:12 pm Mangalore Correspondent ಕರಾವಳಿ
ಉಳ್ಳಾಲ, ಫೆ.1: ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದೆ. ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಾಯಿಗೆ ಬಟ್ಟೆಯನ್ನು ಕಟ್ಟಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಜ.30ರಂದು ಸಂಜೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ಧರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು.

ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಮೂಗಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಶಂಕೆಗೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣು ಹಾಕಿದರೇ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ಧ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಎಂದಿನಂತೆ ಬಂದಿದ್ದ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
Mangalore Physically disabled 23 year old girl commits suicide at home in Ullal. The deceased has been idenitified as Sarita Varma.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm