ಬ್ರೇಕಿಂಗ್ ನ್ಯೂಸ್
01-02-23 12:12 pm Mangalore Correspondent ಕರಾವಳಿ
ಉಳ್ಳಾಲ, ಫೆ.1: ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದೆ. ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಾಯಿಗೆ ಬಟ್ಟೆಯನ್ನು ಕಟ್ಟಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಜ.30ರಂದು ಸಂಜೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ಧರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು.

ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಮೂಗಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಶಂಕೆಗೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣು ಹಾಕಿದರೇ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ಧ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಎಂದಿನಂತೆ ಬಂದಿದ್ದ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
Mangalore Physically disabled 23 year old girl commits suicide at home in Ullal. The deceased has been idenitified as Sarita Varma.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm