ಬ್ರೇಕಿಂಗ್ ನ್ಯೂಸ್
01-02-23 12:12 pm Mangalore Correspondent ಕರಾವಳಿ
ಉಳ್ಳಾಲ, ಫೆ.1: ವಿಶೇಷ ಚೇತನ ಯುವತಿಯೋರ್ವಳು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದೆ. ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಬಾಯಿಗೆ ಬಟ್ಟೆಯನ್ನು ಕಟ್ಟಿರುವುದು ಕೊಲೆ ಶಂಕೆಗೆ ಕಾರಣವಾಗಿದೆ.
ಛತ್ತೀಸ್ ಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಳು. ಜ.30ರಂದು ಸಂಜೆ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು. ಬಾಡಿಗೆ ಮನೆ ಮಾಲೀಕರು ವೃದ್ಧರಾಗಿದ್ದು ಅಸೌಖ್ಯದಿಂದಿದ್ದಾರೆ. ಕೆಳಗಿನ ಅಂತಸ್ತಿನಲ್ಲಿ ಮಾಲೀಕರಿದ್ದರೆ, ಮೇಲಿನ ಅಂತಸ್ತಿನಲ್ಲಿ ಬಾಡಿಗೆ ಕುಟುಂಬ ವಾಸ್ತವ್ಯವಿತ್ತು.

ಸರಿತಾ ವರ್ಮ ವಿಶೇಷ ಚೇತನರಾಗಿದ್ದು, ಮೂಗಿ ಮತ್ತು ಕಿವಿ ಕೇಳದ ಸ್ಥಿತಿಯಲ್ಲಿದ್ದರು. ಸರಿತಾ ಬಾಯಿಗೆ ಬಟ್ಟೆಯನ್ನು ಬಿಗಿಯಾಗಿ ಕಟ್ಟಲಾಗಿದೆ. ಇದು ಶಂಕೆಗೆ ಕಾರಣವಾಗಿದ್ದು, ಹತ್ಯೆ ನಡೆಸಿದ ಬಳಿಕ ಯುವತಿಯನ್ನು ನೇಣು ಹಾಕಿದರೇ ಅನ್ನುವ ಸಂಶಯವನ್ನು ಉಳ್ಳಾಲ ಪೊಲೀಸರು ವ್ಯಕ್ತಪಡಿಸಿದ್ದಾರೆ. ಕೆಳಗಿನ ಮನೆಯಲ್ಲಿರುವ ವೃದ್ಧ ಮಾಲೀಕರಿಗೆ ಯುವಕನೋರ್ವ ಮಧ್ಯಾಹ್ನ ಹಾಗೂ ರಾತ್ರಿ ಊಟ ತರುತ್ತಾನೆ. ಸರಿತಾ ವರ್ಮ ಮೃತದೇಹ ಪತ್ತೆಯಾದ ದಿನದಂದು ಆತ ಎಂದಿನಂತೆ ಬಂದಿದ್ದ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯುಡಿಆರ್ ದಾಖಲಿಸಿರುವ ಪೊಲೀಸರು ಸಂಶಯಾಸ್ಪದ ವ್ಯಕ್ತಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ಕೈಗೆತ್ತಿಕೊಂಡಿದ್ದಾರೆ.
Mangalore Physically disabled 23 year old girl commits suicide at home in Ullal. The deceased has been idenitified as Sarita Varma.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm