ಬ್ರೇಕಿಂಗ್ ನ್ಯೂಸ್
02-02-23 12:51 pm Mangalore Correspondent ಕರಾವಳಿ
ಪುತ್ತೂರು, ಫೆ.2 : ತನ್ನ ಪತ್ನಿಯ ಜೊತೆ ವಿಟ್ಲದ ಬಿಜೆಪಿ ಮುಖಂಡನೊಬ್ಬ ಕಾರಿನಲ್ಲಿ ತೆರಳುತ್ತಿದ್ದುದನ್ನು ಗಮನಿಸಿದ ಮಹಿಳೆಯ ಪತಿರಾಯ ಕಾರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಹಿಡಿದಿದ್ದಲ್ಲದೆ, ಬಿಜೆಪಿ ಮುಖಂಡನಿಗೆ ಧರ್ಮದೇಟು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಈ ವೇಳೆ, ಬಿಜೆಪಿ ಮುಖಂಡ ಮಹಿಳೆ ಹಾಗೂ ಕಾರನ್ನು ಬಿಟ್ಟು ಪಕ್ಕದ ಗುಡ್ಡದಲ್ಲಿ ಪರಾರಿಯಾಗಿದ್ದಾನೆ. ಘಟನೆಯ ವಿಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ಪತಿ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದವರಾಗಿದ್ದು ಪುತ್ತೂರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ತನ್ನ ಪತ್ನಿ (29) ಹಾಗೂ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ, ಪುಣಚ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ (44) ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರುದಾರ ವ್ಯಕ್ತಿ ಮಹಿಳೆಯನ್ನು ಮದುವೆಯಾಗಿ 9 ವರ್ಷವಾಗಿದ್ದು, ಅವರಿಗೆ ಎಂಟು ವರ್ಷದ ಹೆಣ್ಣು ಮಗಳಿದ್ದಾಳೆ. ಪತ್ನಿ ಕೆಲವು ವರ್ಷಗಳಿಂದ ತನ್ನ ಜತೆ ಇರದೇ ಪ್ರತ್ಯೇಕ ವಾಸಿಸುತ್ತಿದ್ದಾಳೆ. ಆದರೇ ನಾವು ವಿವಾಹ ವಿಚ್ಛೇದನ ಪಡೆದುಕೊಂಡಿಲ್ಲ. ನಮ್ಮಿಬ್ಬರ ವಿವಾಹ ಊರ್ಜಿತದಲ್ಲಿದೆಯೆಂದು ದೂರಿನಲ್ಲಿ ತಿಳಿಸಿದ್ದಾರೆ.
ಜ.31ರಂದು ಪತ್ನಿ ಸಮೀಪದ ಜಾತ್ರೆಗೆಂದು ಹೋದವಳನ್ನು ಹರಿ ಪ್ರಸಾದ್ ಅನೈತಿಕ ಸಂಬಂಧ ದುರುದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರನ್ನು ನನ್ನ ಮೋಟಾರ್ ಬೈಕ್ನಲ್ಲಿ ಪುತ್ತೂರಿನಿಂದ ಹಿಂಬಾಲಿಸಿದ್ದೇನೆ. ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಕಾರನ್ನು ತಡೆಯಲು ಪ್ರಯತ್ನಿಸಿದಾಗ ಹರಿಪ್ರಸಾದ್ ಬೈಕ್ ಮೇಲೆ ವಾಹನ ಚಲಾಯಿಸಿ ಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಪ್ಪಿಸಿಕೊಂಡು ಕಾರನ್ನು ತಡೆದಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕೂಡಲೇ ಹರಿ ಪ್ರಸಾದ್ ಕಾರು ಹಾಗೂ ನನ್ನ ಪತ್ನಿಯನ್ನು ಬಿಟ್ಟು ಪರಾರಿಯಾಗಿರುತ್ತಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
Puttur illicit affair with married woman, BJP leader Hariprasad Yadav caught red handed, thrashed by husband in Sullia. Video of this has now gone viral on social media.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm