ಬ್ರೇಕಿಂಗ್ ನ್ಯೂಸ್
02-02-23 12:51 pm Mangalore Correspondent ಕರಾವಳಿ
ಪುತ್ತೂರು, ಫೆ.2 : ತನ್ನ ಪತ್ನಿಯ ಜೊತೆ ವಿಟ್ಲದ ಬಿಜೆಪಿ ಮುಖಂಡನೊಬ್ಬ ಕಾರಿನಲ್ಲಿ ತೆರಳುತ್ತಿದ್ದುದನ್ನು ಗಮನಿಸಿದ ಮಹಿಳೆಯ ಪತಿರಾಯ ಕಾರನ್ನು ಚೇಸ್ ಮಾಡಿ ರೆಡ್ ಹ್ಯಾಂಡ್ ಹಿಡಿದಿದ್ದಲ್ಲದೆ, ಬಿಜೆಪಿ ಮುಖಂಡನಿಗೆ ಧರ್ಮದೇಟು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ.
ಈ ವೇಳೆ, ಬಿಜೆಪಿ ಮುಖಂಡ ಮಹಿಳೆ ಹಾಗೂ ಕಾರನ್ನು ಬಿಟ್ಟು ಪಕ್ಕದ ಗುಡ್ಡದಲ್ಲಿ ಪರಾರಿಯಾಗಿದ್ದಾನೆ. ಘಟನೆಯ ವಿಡಿಯೋ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಹಿಳೆಯ ಪತಿ ಬಂಟ್ವಾಳ ತಾಲೂಕು ಪೆರುವಾಯಿ ಗ್ರಾಮದವರಾಗಿದ್ದು ಪುತ್ತೂರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾರೆ. ತನ್ನ ಪತ್ನಿ (29) ಹಾಗೂ ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷ, ಪುಣಚ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಹರಿಪ್ರಸಾದ್ ಯಾದವ್ (44) ಅನೈತಿಕ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರುದಾರ ವ್ಯಕ್ತಿ ಮಹಿಳೆಯನ್ನು ಮದುವೆಯಾಗಿ 9 ವರ್ಷವಾಗಿದ್ದು, ಅವರಿಗೆ ಎಂಟು ವರ್ಷದ ಹೆಣ್ಣು ಮಗಳಿದ್ದಾಳೆ. ಪತ್ನಿ ಕೆಲವು ವರ್ಷಗಳಿಂದ ತನ್ನ ಜತೆ ಇರದೇ ಪ್ರತ್ಯೇಕ ವಾಸಿಸುತ್ತಿದ್ದಾಳೆ. ಆದರೇ ನಾವು ವಿವಾಹ ವಿಚ್ಛೇದನ ಪಡೆದುಕೊಂಡಿಲ್ಲ. ನಮ್ಮಿಬ್ಬರ ವಿವಾಹ ಊರ್ಜಿತದಲ್ಲಿದೆಯೆಂದು ದೂರಿನಲ್ಲಿ ತಿಳಿಸಿದ್ದಾರೆ.
ಜ.31ರಂದು ಪತ್ನಿ ಸಮೀಪದ ಜಾತ್ರೆಗೆಂದು ಹೋದವಳನ್ನು ಹರಿ ಪ್ರಸಾದ್ ಅನೈತಿಕ ಸಂಬಂಧ ದುರುದ್ದೇಶದಿಂದ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಈ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಕಾರನ್ನು ನನ್ನ ಮೋಟಾರ್ ಬೈಕ್ನಲ್ಲಿ ಪುತ್ತೂರಿನಿಂದ ಹಿಂಬಾಲಿಸಿದ್ದೇನೆ. ಸುಳ್ಯ ತಾಲೂಕಿನ ಜಾಲ್ಸೂರು ಎಂಬಲ್ಲಿ ಕಾರನ್ನು ತಡೆಯಲು ಪ್ರಯತ್ನಿಸಿದಾಗ ಹರಿಪ್ರಸಾದ್ ಬೈಕ್ ಮೇಲೆ ವಾಹನ ಚಲಾಯಿಸಿ ಹತ್ಯೆಗೆ ಯತ್ನಿಸಿದ್ದಾನೆ. ತಕ್ಷಣ ತಪ್ಪಿಸಿಕೊಂಡು ಕಾರನ್ನು ತಡೆದಿದ್ದು, ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ. ಕೂಡಲೇ ಹರಿ ಪ್ರಸಾದ್ ಕಾರು ಹಾಗೂ ನನ್ನ ಪತ್ನಿಯನ್ನು ಬಿಟ್ಟು ಪರಾರಿಯಾಗಿರುತ್ತಾನೆಂದು ದೂರಿನಲ್ಲಿ ಆರೋಪಿಸಲಾಗಿದೆ.
Puttur illicit affair with married woman, BJP leader Hariprasad Yadav caught red handed, thrashed by husband in Sullia. Video of this has now gone viral on social media.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm